HomeCrime Newsಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಲಕ್ಷ ರೂ.ಮೌಲ್ಯದ ಮೊಬೈಲ್ ಹಸ್ತಾಂತರ

ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಲಕ್ಷ ರೂ.ಮೌಲ್ಯದ ಮೊಬೈಲ್ ಹಸ್ತಾಂತರ

Spread the love

ವಿಜಯಸಾಕ್ಷಿ ಸುದ್ದಿ, ಮುಂಡರಗಿ

ಜೂನ್-2020 ರಿಂದ ಅಕ್ಟೋಬರ್-2020 ರವರೆಗಿನ ಒಟ್ಟು 64 ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ, 2 ಲಕ್ಷ 90 ಸಾವಿರ ರೂ. ಮೌಲ್ಯದ ಒಟ್ಟು 24 ಮೊಬೈಲ್ ಕಳ್ಳತನ ಪ್ರಕರಣಗಳನ್ನು ಮುಂಡರಗಿ ಪೊಲೀಸರು ಬೇಧಿಸಿದ್ದು, ಸಾರ್ವಜನಿಕರ ಮೆಚ್ಚುಗೆ ಪಾತ್ರವಾಗಿದೆ.

ಮೊಬೈಲ್ ಫೋನ್ ಕಳ್ಳತನ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ಮುಂಡರಗಿ ಪೊಲೀಸರು, ನವನವೀನ ತಂತ್ರಜ್ಞಾನ ಹಾಗೂ ಸಿಡಿಆರ್ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಅವರ ಮಾರ್ಗದರ್ಶನದಲ್ಲಿ, ಡಿಸಿಆರ್ಬಿಯ ಗುರು ಬೂದಿಹಾಳ ಮಾಹಿತಿಯಂತೆ ಸಾರ್ವಜನಿಕರು ಕಳೆದುಕೊಂಡಿದ್ದ ಸಕ್ರಿಯಗೊಂಡ ಸಿಮ್ ನಂಬರ್ ಟ್ರ್ಯಾಕ್ ಮಾಡಿ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಕೊಂಡಿದ್ದ ಮಾಲೀಕರಿಗೆ ನರಗುಂದ ಡಿಎಸ್ಪಿ ಶಂಕರ್ ರಾಗಿ, ಸಿಪಿಐ ಸುಧೀರ್ ಬೆಂಕಿ, ಪಿಎಸ್ಐ ನೂರಜಾನ್ ಸಬರ ಹಸ್ತಾಂತರಿಸಿದರು.

ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳಾದ ಜಾಫರ್ ಬಚ್ಚೇರಿ, ನೀಲಕಂಠ ಭಂಗಿ, ಶರಣಪ್ಪ ನಾಗೇಂದ್ರಗಡ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹಾಗೂ ನರಗುಂದ ಡಿವೈಎಸ್ಪಿ ಶಂಕರ ರಾಗಿ ಅವರು, ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!