ಪೊಲೀಸ್ ಸಿಬ್ಬಂದಿಗಳಿಗೆ ತರಕಾರಿ ಕಿಟ್ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಹೂವಿನ ಹಡಗಲಿ

Advertisement

ಕೊರೊನಾ ಮಹಾಮಾರಿಯ ನಿಯಂತ್ರಣಕ್ಕಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಕರ್ನಾಟಕ ಸಮರ ಸೇನೆಯ ತಾಲೂಕ ಅಧ್ಯಕ್ಷ ಬಿ ಎಂ ವೀರಯ್ಯಸ್ವಾಮಿ ಹೇಳಿದರು.

ಪ್ರಗತಿಪರ ರೈತರಾದ ಎಂ ಎಸ್ ಜಾನ್ ಅವರ ಜಮೀನಿನಲ್ಲಿ ಬೆಳೆದಂತಹ ತರಕಾರಿಗಳನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಮೂಲಕ ಸರ್ಕಾರ ಜಾರಿ ಮಾಡಿದ ಲಾಕ್ ಡೌನ್ ಅನ್ನು ಪ್ರತಿಯೊಬ್ಬರೂ ಪಾಲಿಸಿ ಎಂದ ಅವರು, ಸಾರ್ವಜನಿಕರ ಜೀವ ರಕ್ಷಣೆ ಮಾಡುತ್ತಿರುವ ಪೋಲೀಸ್ ಇಲಾಖೆಗೆ ಸಹಕಾರ ನೀಡಿ, ಕೊರೊನಾ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದರು.

ಡಿವೈಎಸ್ಪಿ ಹಾಲ ಮೂರ್ತಿರಾವ್ ಮಾತನಾಡಿ, ಉಚಿತ ತರಕಾರಿಗಳನ್ನು ನೀಡಿದ ಪ್ರಗತಿಪರ ರೈತರಾದ ಎಂ ಎಸ್ ಜಾನ್ ರವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೋಂಕು ನಿಯಂತ್ರಣಕ್ಕಾಗಿ ಪ್ರತಿಯೊಂದು ಇಲಾಖೆಯ ಸಿಬ್ಬಂದಿಗಳು ಶ್ರಮಿ‌ಸುತ್ತಿದ್ದಾರೆ. ಸಾರ್ವಜನಿಕರು ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಕೈಜೋಡಿಸಿ ಕೊರೊನಾ ಮುಕ್ತ ದೇಶವನ್ನಾಗಿ ಮಾಡಲು ಹೋರಾಡಬೇಕೆಂದು ಎಂದರು.

ಸಿ ಪಿ ಐ ರಾಮರೆಡ್ಡಿ ಮಾತನಾಡಿ, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಜಾಗೃತಗೊಂಡು ಈ ಕೊರೊನಾ ಮಹಾಮಾರಿಯ ರೋಗದಿಂದ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಎ ಎಸ್ ಐ ವಡಕಪ್ಪ ಸೇರಿದಂತೆ ಸಿಬ್ಬಂದಿಗಳು, ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here