ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕ್ಯಾನ್ಸರ್ ರೋಗದಿಂದ ಬಳಲುವ ಅಲ್ಪಸಂಖ್ಯಾತರು, ಅದರಲ್ಲೂ ಮುಸ್ಲಿಂ ಮಹಿಳೆಯರ ಚಿಕಿತ್ಸೆಗೆ ಕೊಡಮಾಡುವ ಸಹಾಯಧನವನ್ನು ಹಿಂಪಡೆಯಲು ಒತ್ತಾಯ ಮಾಡಿರುವ ಬಿಜಾಪೂರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಕೆಪಿಸಿಸಿ ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮಹಮ್ಮದ್ ಶಾಲಗಾರ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ‌ನೀಡಿರುವ ಅವರು, ಯತ್ನಾಳ ಹೇಳಿಕೆ ಸಮುದಾಯಗಳಲ್ಲಿ ಕಲಹ ಉಂಟು ಮಾಡುವ ಹಾಗೂ ಪ್ರಚೋದನೆಗೆ ಇಂಬು ನೀಡುವಂತಾಗಿದ್ದು, ಇದು ಖಂಡನೀಯವಾಗಿದೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಶಾಲಗಾರ ಒತ್ತಾಯ ಮಾಡಿದ್ದಾರೆ.

ಬೇರೆ ಸಮುದಾಯದ ಜನರಿಗೂ ಸಹಾಯಧನ ಕೊಡಲು ಸರಕಾರಕ್ಕೆ ಒತ್ತಾಯ ಮಾಡಬೇಕೆ ಹೊರತು, ಅದನ್ನು ಹಿಂದಕ್ಕೆ ಪಡೆಯಲು ಒತ್ತಾಯ ಮಾಡುವುದು ಸರಿಯಲ್ಲ ಎಂದು ಶಾಲಗಾರ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here