ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯ ಆದೇಶ ಪಾಲನೆ ಅಗತ್ಯ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

0
Spread the love

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

Advertisement

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು‌ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. ದೇವಸ್ಥಾನ ತೆರವು ವಿಚಾರವಾಗಿ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,‌ ಸುಪ್ರೀಂನಲ್ಲಿ ತಪ್ಪಾದರೆ ಅಮೈಂಡ್ ಮಾಡುವ ಅಧಿಕಾರ ಪಾರ್ಲಿಮೆಂಟ್ ಗೆ ಇದೆ. ಪಾರ್ಲಿಮೆಂಟ್ ನಲ್ಲಿ ತಪ್ಪು ಮಾಡಿದಾಗ ಪ್ರಶ್ನಿಸುವ ಅಧಿಕಾರ ರಾಷ್ಟ್ರಪತಿಗಿದೆ. ಈಡೀ ವಿಶ್ವಕ್ಕೆ ನಮ್ಮ ಪ್ರಜಾಪ್ರಭುತ್ವ ಮಾದರಿಯಾಗಿದೆ ಎಂದರು.

ಗೊತ್ತೋ ಗೊತ್ತಿಲ್ಲದೆ ಸಂಸದ ಪ್ರತಾಪ್ ಸಿಂಹ ದೇವಸ್ಥಾನ ತೆರವಿಗೆ ವಿರೋಧ ಮಾಡುತ್ತಿದ್ದಾರೆ.‌ ಈ ಕುರಿತು ಚರ್ಚೆ ಆಗುತ್ತದೆ, ತಪ್ಪುಗಳು ನಡೆದಾಗ ತಿದ್ದಿಕೊಳ್ಳುತ್ತೇವೆ ಎಂದು ಹೇಳಿದರು.

ನಾವು ಹಿಂದೂ ರಾಷ್ಟ್ರ ಕಟ್ಟಲು ಹೊರಟಿದ್ದೇವೆ, ಡೋಂಗಿ ರಾಜಕಾರಣ ಮಾಡಲ್ಲ. ಬಿಜೆಪಿ ಮತ್ತು ಸಂಘ ಹಿಂದು ರಾಷ್ಟ್ರ ನಿರ್ಮಾಣಕ್ಕೆ ಕಟಿಬದ್ಧವಾಗಿವೆ. ಹಾಗಂತ ಬೇರೆ ಧರ್ಮಗಳನ್ನು ವಿರೋಧಿಸಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here