ವಿಜಯಸಾಕ್ಷಿ ಸುದ್ದಿ, ಗದಗ
ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದ ಘಟನೆಯಲ್ಲಿ ವಾಹನಗಳು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪಿದ್ದಾರೆ.
ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದ ಬಳಿ ಟಂ ಟಂ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹತ್ತು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಶಿರುಂಜ ಗ್ರಾಮದ ಶರಣಪ್ಪ ಪಾಟೀಲ (10) ಮೃತ ಬಾಲಕ. ಗದಗ ತಾಲೂಕಿನ ಶಿರುಂಜ ಗ್ರಾಮದವರಾದ ಸವಿತಾ ಹುಲಕಟ್ಟಿ, ಹಾಲಪ್ಪ ತಳವಾರ, ಭೀಮವ್ವ ಲಂಕೆನ್ನವರ, ಚನ್ನವ್ವ ತಳವಾರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಘಟನೆಯಲ್ಲಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಮಾಳವಾಡ ಗ್ರಾಮದ ಹತ್ತಿರ ನಡೆದಿದೆ. ಶಿವಬಸಪ್ಪ ಬಸವಂತಪ್ಪ ಬೂದಿಹಾಳ (54) ಮೃತರು.
ಮಾಳವಾಡದಿಂದ ಅಸೂಟಿ ಗ್ರಾಮದ ಕಡೆಗೆ ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಶಿವಬಸಪ್ಪ ಸ್ಥಳದಲ್ಲೇ ಮೃತಪಟ್ಟರೆ, ಯಲ್ಲಪ್ಪ ಚಕ್ರದ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.