ಪ್ರೇಮ ವೈಫಲ್ಯ – ಉಪನ್ಯಾಸಕ ಆತ್ಮಹತ್ಯೆಗೆ ಶರಣು!

0
Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ

Advertisement

ಪ್ರೇಮ ವೈಫಲ್ಯದಿಂದಾಗಿ ಅತಿಥಿ ಉಪನ್ಯಾಸಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಈ ಅತಿಥಿ ಉಪನ್ಯಾಸಕರು ಕಲಬುರಗಿ ಅಪ್ಪನ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ನಗರದ ಲಾಲ್ ಗೇರಿ ಕ್ರಾಸ್ ನಿವಾಸಿ ಅಂಬರೀಷ್(35) ಎಂದು ಗುರುತಿಸಲಾಗಿದೆ.

ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮನೆಗೆ ಕರೆ ಮಾಡಿ ಹೇಳಿ ಕೆರೆಗೆ ಹಾರಿದ್ದಾರೆ. ಅವರ ಶವ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಬ್ರಹ್ಮಪೂರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here