ಫೇಸ್ ಬುಕ್ ನಲ್ಲಿ ರಾಜ್ಯದ ಸಿಎಂ ಆದ ಅರವಿಂದ್ ಬೆಲ್ಲದ!

0
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ

Advertisement

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಭಾರಿ ಸದ್ದು ಮಾಡುತ್ತಿದೆ. ಈ ಚರ್ಚೆ ತಾರಕಕ್ಕೆ ಏರಿದ ಬೆನ್ನಲ್ಲಿಯೇ ಶಾಸಕ ಅರವಿಂದ ಬೆಲ್ಲದ್ ಅವರು ದೆಹಲಿ ಪ್ರಯಾಣ ಬೆಳೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇಂತಹ ಬೆಳವಣಿಗೆಗಳ ಮಧ್ಯೆಯೇ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ಬೆಲ್ಲದ್ ಮುಂದಿನ ಸಿಎ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ್ ಬೆಲ್ಲದ್ ಅವರ ಫೋಟೋ ಹಾಕಿ, ನಮ್ಮ ಮುಂದಿನ ಸಿಎಂ ಇವರೇ ಎಂದು ಬರೆದುಕೊಂಡು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಾಜ್ಯದ ಮುಂದಿನ ಮುಖ್ಯಮಂತ್ರಿ, ಉತ್ತರ ಕರ್ನಾಟಕ ವೀರಶೈವ ಮುಖಂಡ ಅರವಿಂದ ಬೆಲ್ಲದ್ ಅವರು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಸಂಬ್ರಮಿಸುತ್ತಿದ್ದಾರೆ.

ಹುಬ್ಬಳ್ಳಿ- ಧಾರವಾಡ ಭಾಗದಲ್ಲಿನ ಬೆಲ್ಲದ್ ಅವರ ಅಭಿಮಾನಿಗಳ ಫೇಸ್ ಬುಕ್ ಖಾತೆಯಲ್ಲಿ ಈ ಕುರಿತು ಬರೆದುಕೊಳ್ಳಲಾಗಿದೆ. ಸದ್ಯ ಅರವಿಂದ ಬೆಲ್ಲದ್ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲಯಲ್ಲಿ ಅವರು ದೆಹಲಿಗೆ ಕೂಡ ಹೋಗಿ ವರಿಷ್ಠರನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ. ಆದರೆ, ಇದು ಪಕ್ಷದಲ್ಲಿ ಸಹನೀಯ ಕಾರ್ಯವಾಗಬಹುದು. ಆದರೆ, ಇದು ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಬಹುದು.

ಅರವಿಂದ್ ಬೆಲ್ಲದ್ ಅವರ ಅಭಿಮಾನಿಗಳ ವರ್ತನೆ ಇದೇ ರೀತಿ ಮುಂದುವರೆದರೆ, ಬೆಲ್ಲದ್ ಅವರ ರಾಜಕೀಯದ ಮೇಲೆ ಮಂಕು ಕವಿಯುವ ಸಾಧ್ಯತೆಯೇ ಹೆಚ್ಚಾಗಿದೆ.


Spread the love

LEAVE A REPLY

Please enter your comment!
Please enter your name here