HomeCrime Newsಬನಹಟ್ಟಿ ಗ್ರಾಮ ಸಂಪೂರ್ಣ ಲಾಕ್‌ಡೌನ್; ಕೊರೊನಾ ನಿಯಮ ಗಾಳಿಗೆ ತೂರಿ ಓಕಳಿ ಆಡಿದ ಗ್ರಾಮಸ್ಥರು

ಬನಹಟ್ಟಿ ಗ್ರಾಮ ಸಂಪೂರ್ಣ ಲಾಕ್‌ಡೌನ್; ಕೊರೊನಾ ನಿಯಮ ಗಾಳಿಗೆ ತೂರಿ ಓಕಳಿ ಆಡಿದ ಗ್ರಾಮಸ್ಥರು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಕೊರೊನಾ ಮಧ್ಯೆಯೂ ಓಕುಳಿ ಆಡಿರುವ ಕುರಿತು ವಿಜಯಸಾಕ್ಷಿ ವೆಬ್ ಸುದ್ದಿ ಕಂಡು ಎಚ್ಚೆತ್ತ ತಹಸೀಲ್ದಾರ್ ಹಾಗೂ ಅಧಿಕಾರಿಗಳು ನರಗುಂದ ತಾಲೂಕನ ಬನಹಟ್ಟಿ ಗ್ರಾಮಕ್ಕೆ ದೌಡಾಯಿಸಿ, ಸಭೆ ನಡೆಸಿದ್ದು, ಗ್ರಾಮವನ್ನು ಸಂಪೂರ್ಣ ಲಾಕ್‌ಡೌನ್ ಮಾಡಿದ್ದಾರೆ.

ನರಗುಂದ ತಾಲೂಕಿನ ಬನಹಟ್ಟಿ ಗ್ರಾಮಸ್ಥರು ಕೋವಿಡ್ ನಿಯಮ ಉಲ್ಲಂಘಿಸಿ ಓಕಳಿ ಆಡಿದ್ದರು. ದೇವರ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಈ ಗ್ರಾಮಸ್ಥರು ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ಓಕಳಿ ಆಡಿದ್ದರು.

ಪ್ರತಿಯೊಬ್ಬರಿಗೂ ಕೋವಿಡ್ ಟೆಸ್ಟ್

ಈ ಕುರಿತು ವಿಜಯಸಾಕ್ಷಿ ವೆಬ್‌ನಲ್ಲಿ ಸುದ್ದಿ ಪ್ರಸಾರವಾಗಿತ್ತು. ವರದಿ ಕಂಡು ಎಚ್ಚೆತ್ತುಕೊಂಡ ನರಗುಂದ ತಹಸೀಲ್ದಾರ್ ಅಮರವಾಡಗಿ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆನಂತರ ತಹಸೀಲ್ದಾರ ನೇತೃತ್ವದಲ್ಲಿ ಗ್ರಾ.ಪಂ. ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಗ್ರಾಮದ ಪ್ರತಿಯೊಬ್ಬರನ್ನೂ ಕೋವಿಡ್ ಟೆಸ್ಟ್ ಗೆ ಒಳಪಡಿಸುವಂತೆ ತಹಸೀಲ್ದಾರ್ ಸೂಚಿಸಿದ್ದಾರೆ. ಹೀಗಾಗಿ ತಾಲೂಕು ಆಡಳಿತ ಗ್ರಾಮದಲ್ಲಿ ಬೀಡು ಬಿಟ್ಟಿದೆ. ಇಡೀ ಗ್ರಾಮವನ್ನು ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಓಕುಳಿ ಆಡಿದ ಎಲ್ಲರ ಮೇಲೂ ಕಾನೂನು ಕ್ರಮ ಜರುಗಿಸಲಾಗಿದೆ. ಗ್ರಾಮದ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಹಾಲು, ತರಕಾರಿ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಊರಲ್ಲಿ ಯಾವುದೇ ಚಟುವಟಿಕೆ ಇರುವುದಿಲ್ಲ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಕಣ್ಣು ತಪ್ಪಿಸಿ ಮೂರ್ತಿ ಪ್ರತಿಷ್ಠಾಪನೆ
ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿಯೇ ಈ ಗ್ರಾಮದ ಜನರು ಅಧಿಕಾರಿಗಳ ಕಣ್ಣು ತಪ್ಪಿಸಿ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರೆಲ್ಲ ಸೇರಿ ಓಕುಳಿ ಆಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಗ್ರಾಮಕ್ಕೆ ಬಂದು ಟಾಸ್ಕ್ ಫೋರ್ಸ್ ಸಮಿತಿಯ ಸಭೆ ನಡೆಸಲಾಗಿದೆ. ನಾಲ್ಕು ದಿನಗಳ ಕಾಲ ಗ್ರಾಮವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ

  • ಅಮರವಾಡಗಿ, ತಹಸೀಲ್ದಾರ್, ನರಗುಂದ

ನಾಲ್ಕು ದಿನ ಲಾಕ್‌ಡೌನ್
ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡದಂತೆ ಅಧಿಕಾರಿಗಳು ಸಾಕಷ್ಟು ತಿಳುವಳಿಕೆ ಮೂಡಿಸಿದ್ದರು ಬನಹಟ್ಟಿ ಗ್ರಾಮಸ್ಥರು ಆ ಕಾರ್ಯ ಮಾಡಿದ್ದಾರೆ. ಹೀಗಾಗಿ ಇಂದು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಸದ್ಯ ಇಡೀ ಗ್ರಾಮದಲ್ಲಿ ನಾಲ್ಕು ದಿನ, ಅಂದರೆ ಭಾನುವಾರ ರಾತ್ರಿ 12ರ ವರೆಗೆ ಲಾಕ್ ಡೌನ್ ಹೇರಲಾಗಿದೆ.

  • ಚಂದ್ರಶೇಖರ ಕುರ್ತಕೋಟಿ, ತಾ.ಪಂ. ಇಓ, ನರಗುಂದ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!