ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸ್ಯಾಂಡಲ್ ವುಡ್ ನಲ್ಲಿ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಕೆಸಿಎನ್ ಚಂದ್ರಶೇಖರ್ ನಿಧನರಾಗಿದ್ದಾರೆ.
ಇವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹುಲಿಯ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ತಮ್ಮ ಸಂಸ್ಥೆಯ ಮೂಲಕ ಹಲವು ಯಶಸ್ವಿ ಸಿನಿಮಾಗಳನ್ನು ನೀಡುವ ಮೂಲಕ ಕನ್ನಡಕ್ಕೆ ತಮ್ಮದೆಯಾದ ಕೊಡುಗೆಗಳನ್ನು ನೀಡಿದ್ದಾರೆ.
ಇಂದು ಮಧ್ಯಾಹ್ನ ಚಂದ್ರಶೇಖರ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಗರದ ಶಿವಾನಂದ ಸರ್ಕಲ್ ಬಳಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.



