ಬಿಎಸ್ ವೈ ರಾಜೀನಾಮೆಯಿಂದ ರಾಜ್ಯಕ್ಕೆ ನಷ್ಟವಿಲ್ಲ

0
Spread the love

  • ಯಡಿಯೂರಪ್ಪ ರಾಜ್ಯ ಕಂಡ ಕಡುಭ್ರಷ್ಟ ಸಿಎಂ
  • ಗದಗನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಯಡಿಯೂರಪ್ಪ ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರೋದ್ರಿಂದ ರಾಜ್ಯಕ್ಕೆ ಒಳ್ಳೆದಾಗೋದಿಲ್ಲ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಗದಗನಲ್ಲಿ ಯಡಿಯೂರಪ್ಪ ಸಿಎಂ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,
ಬಿಜೆಪಿಯೇ ಒಂದು ಭ್ರಷ್ಟ ಪಕ್ಷ, ಬಿಜೆಪಿ ತೊಲಗದೇ ಹೋದರೆ ಈ ರಾಜ್ಯಕ್ಕೆ ಮುಕ್ತಿಯಿಲ್ಲ ಎಂದು ಹರಿಹಾಯ್ದರು.

ಯಡಿಯೂರಪ್ಪ ಕರ್ನಾಟಕ ಕಂಡ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಇನ್ನೊಬ್ಬ ಬಂದರೂ ಭ್ರಷ್ಟ ಮುಖ್ಯಮಂತ್ರಿಯೇ ಆಗಿರ್ತಾರೆ ಎಂದು ಟೀಕಿಸಿದರು. ಮುಂದಿನ ಸಿಎಂ ಯಾರಾಗಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಾನೇನು ಬಿಜೆಪಿ ಅಧ್ಯಕ್ಷನೆ..? ಅದು ಅವರ ಪಕ್ಷದ ವಿಚಾರ ಎಂದು ಉತ್ತರಿಸಿದರು.

ಯಡಿಯೂರಪ್ಪ ಪರ ಸ್ವಾಮೀಜಿಗಳು ನಿಂತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸ್ವಾಮೀಜಿಗಳು ರಾಜಕಾರಣದಲ್ಲಿ ಬರದೇ ಇರೋದು ಒಳ್ಳೆಯದು, ಧರ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತ ಇರಬೇಕು ಎಂದು ಹೇಳಿದರು.

ರಾಜ್ಯಕ್ಕೆ ಹೊಸ ಸಿಎಂ ಬಂದರೂ ಸರಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮ ಹೋರಾಟ ಮುಂದುವರಿಯಲಿದೆ ಎಂದರು. ಕಾಂಗ್ರೆಸ್ ವಲಸಿಗರ ಪರಿಸ್ಥಿತಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷ ಬಿಟ್ಟು ಬಿಜೆಪಿಗೆ ಹೋದವರಿಗೆ ಜನ ಪಾಠ ಕಲಿಸ್ತಾರೆ ಎಂದು ಗುಡುಗಿದರು.


Spread the love

LEAVE A REPLY

Please enter your comment!
Please enter your name here