ಬಿಗ್ ಬಾಸ್ ಸ್ಪರ್ಧಿಗಳೊಂದಿಗೆ ವಾರದ ಪಂಚಾಯಿತಿ ನಡೆಸಿದ ಸುದೀಪ್!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಕೊರಾನಾದಿಂದಾಗಿ ಜನಪ್ರಿಯ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಅದರ ಅಭಿಮಾನಿಗಳು ಬೇಸರದಲ್ಲಿದ್ದಾರೆ. ಮನೆಯ ಸದಸ್ಯರು 71 ದಿನಕ್ಕೆ ಹೊರ ನಡೆದರು. ಆದರೆ, ಮನರಂಜನೆ ಮಾತ್ರ ಇನ್ನೂ ನಿಂತಿಲ್ಲ.

ಸದ್ಯ ಮತ್ತೆ ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಸುದೀಪ್ ವಾರದ ಪಂಚಾಯಿತಿ ನಡೆಸಿದ್ದಾರೆ. ಎಲ್ಲರನ್ನೂ ಜೊತೆ ಸೇರಿಸಿ ಮಾತನಾಡಿದ್ದಾರೆ. ಪ್ರತಿ ವಾರ ಬಿಗ್ ಬಾಸ್ ನಿಂದ ಎಲಿಮಿನೇಟ್ ಆದ ಸ್ಪರ್ಧಿಗಳನ್ನು ವೇದಿಕೆ ಕರೆಯಿಸಿ ಕಿಚ್ಚ ಸುದೀಪ್ ಮಾತನಾಡಿಸುತ್ತಿದ್ದರು.
ಆದರೆ ಈ ಶೋ ಮುಗಿಯುವುದಕ್ಕಿಂತಲೂ ನಾಲ್ಕು ವಾರ ಮೊದಲೇ ಸುದೀಪ್ಗೆ ಆರೋಗ್ಯ ಕೂ ಕೈ ಕೊಟ್ಟಿತ್ತು. ಹೀಗಾಗಿ ಅವರಿಗೆ ವೀಕೆಂಡ್ ಎಪಿಸೋಡ್ ಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ, ಕೊನೆಯ ದಿನ ಮನೆಯಿಂದ ಹೊರಬಂದ 11 ಸ್ಪರ್ಧಿಗಳಿಗೂ ಸುದೀಪ್ ಜೊತೆ ಮಾತನಾಡುವ ಅವಕಾಶ ಸಿಕ್ಕಿರಲಿಲ್ಲ.

ಸದ್ಯ ಸುದೀಪ್ ಜೊತೆ ಅವರೆಲ್ಲರ ಮಾತುಕತೆಗಾಗಿ ಕಲರ್ಸ್ ಕನ್ನಡ ವಾಹಿನಿ ಒಂದು ವೇದಿಕೆ ಒದಗಿಸಿದೆ. ಆದರೆ, ಕೊರೊನಾ ಇರುವುದರಿಂದಾಗಿ ಯಾರನ್ನೂ ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿಡಿಯೋ ಕಾಲ್ ಮೂಲಕ ಎಲ್ಲರ ಜೊತೆಗೆ ಸುದೀಪ್ ಮಾತನಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here