ಬಿಜೆಪಿಯ 40 ಜನ ಶಾಸಕರು ಶೀಘ್ರ ಕಾಂಗ್ರೆಸ್‌ಗೆ; ಮಾಜಿ ಶಾಸಕ ಹೊಸ ಬಾಂಬ್

0
Spread the love

ವಿಜಯಸಾಕ್ಷಿ ಸುದ್ದಿ, ಅಥಣಿ

Advertisement

ಬಿಜೆಪಿಯ 40 ಜನ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಎರಡ್ಮೂರು ಶಾಸಕರು ಕಾಂಗ್ರೆಸ್ ಬರಲು ಸಿದ್ಧವಾಗಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಂದಿದ್ದೇನೆ.

ನನಗೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ತೊಡಗಲು ಹೇಳಿದ್ದಾರೆ. ಶೀಘ್ರದಲ್ಲಿ 40 ಜನ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಪುನರುಚ್ಚರಿಸಿದರು.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವರು, ಶಾಸಕರ ಮಧ್ಯೆ ವೈಮನಸ್ಸು ಇದೆ. ಹೊಂದಾಣಿಕೆ ಕೊರತೆಯಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here