HomeDharwadಬಿಜೆಪಿ ಮಂತ್ರಿಗಳ ಮುಖಂಡತ್ವದಲ್ಲಿ ಮೂಜಗಂ ಮಠದ 500 ಕೋಟಿ ರೂ. ಆಸ್ತಿ‌ ನಾಶ, ಹಿಂದೂಗಳು ಎಷ್ಟೋ...

ಬಿಜೆಪಿ ಮಂತ್ರಿಗಳ ಮುಖಂಡತ್ವದಲ್ಲಿ ಮೂಜಗಂ ಮಠದ 500 ಕೋಟಿ ರೂ. ಆಸ್ತಿ‌ ನಾಶ, ಹಿಂದೂಗಳು ಎಷ್ಟೋ ಮಂದಿರ ದ್ವಂಸಗೊಳಿಸಿರುವ ಉದಾಹರಣೆಗಳಿವೆ: ದಿಂಗಾಲೇಶ್ವರಶ್ರೀ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಹಿಂದೂ ದೇವಾಸ್ಥಾನ ನಾಶ ಮಾಡಿದ ಮುಸ್ಲಿಂ ದೊರೆಗಳ ಬಗ್ಗೆ ನಾವು ಭಾಷಣ ಮಾಡುತ್ತೇವೆ. ಆದರೆ, ಹಿಂದೂಗಳೇ ಎಷ್ಟೋ ದೇವಾಲಯಗಳನ್ನು ನಾಶ ಮಾಡಿರುವ ಉದಾಹರಣೆಗಳು ನಮ್ಮ ಕಣ್ಣರದುರಿಗೆ ಇವೆ.
ಕೇವಲ ಪರ ಧರ್ಮಿಯರು ಮಂದಿರ ನಾಶಗೊಳಿಸಿದರಷ್ಟೇ ತಪ್ಪಲ್ಲ, ಸ್ವಧರ್ಮಿಯರು ನಾಶಗೊಳಿಸಿದರೂ ಅಷ್ಟೇ ತಪ್ಪು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಅಭಿಪ್ರಾಯ ಪಟ್ಟರು.

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಪ್ರಯುಕ್ತವಾಗಿ ಲಕ್ಷ್ಮೇಶ್ವರದಲ್ಲಿ ಶನಿವಾರ ಸಂಜೆ ನಡೆದ ನಿಧಿ ಸಮರ್ಪಣಾ ಅಭಿಯಾನದ ಧರ್ಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನಮ್ಮ ಶಕ್ತಿ, ಸಂಸ್ಕೃತಿ ನಾಶವಾದ ಹಾಗೆ, ನಮ್ಮ ದೇವಾಲಯಗಳು ಮಠಗಳು ನಾಶವಾಗಬಾರದು ಎಂಬುವುದಕ್ಕೆ ನೀವು ಒಂದು ಸಾರಿ ಬ್ರಿಟಿಷ್ ಮತ್ತು ಮುಸ್ಲಿಂ ದೊರೆಗಳ ಕುತಂತ್ರ ಓದಿಕೊಂಡಾಗ, ಯಾಕೆ ದೇವಾಲಯಗಳನ್ನು ರಕ್ಷಣೆ ಮಾಡಬೇಕು ಎಂಬುವುದು ಗೊತ್ತಾಗುತ್ತದೆ ಎಂದು ತಿಳಿಸಿದರು.

ಸದ್ಯಕ್ಕೆ ಹುಬ್ಬಳ್ಳಿ ಮೂರು ಸಾವಿರ ಮಠದ ಆಸ್ತಿ 500 ಕೋಟಿ ರೂ. ಹೋಗಿದೆ. ಅದು ಬಿಜೆಪಿ ಮಂತ್ರಿಗಳ ಮುಖಂಡತ್ವದಲ್ಲಿ ಹೋಗಿದ್ದು, ಅದಕ್ಕೆ ಓರ್ವ ಕಾಂಗ್ರೆಸ್ ಹಾಗೂ ಇನ್ನೋರ್ವ ಜೆಡಿಎಸ್ ಮುಖಂಡ ಸಾಥ್ ನೀಡಿದ್ದಾರೆ. ನಾವು ದೊಡ್ಡ ಪ್ರಮಾಣದಲ್ಲಿ ದೇವಾಲಯ, ಮಠಗಳನ್ನು ಉಳಿಸಬೇಕೆಂದು ಹೋರಾಟ ಮಾಡುತ್ತಿದ್ದೇವಲ್ಲಾ. ಮಕ್ಕಳಿಗೆ ಅನ್ನ ಹಾಕಿ, ವಿದ್ಯೆ ಕೊಟ್ಟ ಮಠದ 500 ಕೋಟಿ ರೂ. ನಾಶವಾಗಿದೆ. ನನ್ನ ಸಲುವಾಗಿ ನೂರು ತರಹದ ತಪ್ಪು ಕಲ್ಪನೆ ಬಿತ್ತರಿಸುತ್ತಿದ್ದಾರೆ. ಯಾರು ಈ ದೇಶದ ಇತಿಹಾಸದಲ್ಲಿ ಸಾರ್ವಜನಿಕ ಮಠ, ಮಂದಿರ, ಆಶ್ರಮಗಳನ್ನು ಉಳಿಸಬೇಕೆಂದು ಹೋಗುತ್ತಾರೆಯೋ ಅವರ ವಿರುದ್ಧ ಅಪಪ್ರಚಾರ ನಡೆಯುತ್ತದೆ ಎಂದರು.

ಈಗಾಗಲೇ ಸಾವಿರಾರು ದೇವಸ್ಥಾನಗಳು ನಾಶವಾಗಿವೆ. ಇನ್ನುಳಿದವುಗಳನ್ನು ಉಳಿಸಬೇಕೆಂದರೆ ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಸ್ಥೆ ಪರಾಧೀನವಾಗದಂತೆ ಸರ್ಕಾರ ಕಾನೂನು ರೂಪಿಸಬೇಕು.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಸರ್ಕಾರವಾಗಿರಲಿ ನಮ್ಮ ದೇವಸ್ಥಾನದ ಆಸ್ತಿ ಮುಟ್ಟುವವರ ವಿರುದ್ಧ ಹೋರಾಟ ಆಗಲೇಬೇಕು ಎಂದು ದಿಂಗಾಲೇಶ್ವರ ಶ್ರೀಗಳು ಒತ್ತಾಯಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!