ಬಿಪಿಎಲ್ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಸಿಎಂ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಕೋವಿಡ್ ನಿಂದಾಗಿ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದರೆ, ಅಂತಹ ಕುಟುಂಬಸ್ಥರಿಗೆ ರೂ. 1 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಸ್ಥರಿಗೆ ರೂ. 1 ಲಕ್ಷ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಒಂದು ಕುಟುಂಬದಲ್ಲಿನ ಇಬ್ಬರು ಮೂವರು ದುಡಿಯುವ ವ್ಯಕ್ತಿ ಸಾವನ್ನಪ್ಪಿದ್ದರೂ ಒಬ್ಬರನ್ನು ಪರಿಗಣಿಸಿ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ.

30 ರಿಂದ 50 ವರ್ಷದೊಳಗಿನ ದುಡಿಯುವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದರೆ, ಅಂತಹ ಕುಟುಂಬಗಳಿಗೆ ಸರ್ಕಾರದ ಈ ನೆರವು ಸಿಗಲಿದೆ. ರಾಜ್ಯದಲ್ಲಿನ ಸುಮಾರು 25 ರಿಂದ 30 ಸಾವಿರ ಕುಟುಂಬಗಳು ಈ ಯೋಜನೆಯ ಲಾಭ ಪಡೆಯಬಹುದು ಎಂದು ಸರ್ಕಾರ ಅಂದಾಜಿಸಿದೆ.

ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಇಂತಹ ಯೋಜನೆಯೊಂದನ್ನು ಜಾರಿಗೊಳಿಸಿದೆ. ಮಹಾಮಾರಿಯಿಂದಾಗಿ ರಾಜ್ಯದಲ್ಲಿನ ಹಲವು ಕುಟುಂಬಗಳು ಬೀದಿಗೆ ಬಂದಿದ್ದು, ಅಂತಹ ಕುಟುಂಬಸ್ಥರ ನೆರವಿಗೆ ನಿಲ್ಲುವ ಉದ್ಧೇಶದಿಂದ ಸರ್ಕಾರ ಇಂತಹ ಮಹತ್ತರ ಯೋಜನೆ ಜಾರಿಗೊಳಿಸಿದೆ.


Spread the love

LEAVE A REPLY

Please enter your comment!
Please enter your name here