ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ;
ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಮಕ್ಕಳಿಗೆ ಊಟ ಬಡಿಸುವ ಮೂಲಕ ಬಿಸಿಯೂಟ ಪ್ರಾರಂಭೋತ್ಸವಕ್ಕೆ
ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಬಿಸಿಯೂಟ ಕಾರ್ಯಕ್ರಮ ಇಂದು ಪ್ರಾರಂಭ ಆಗಿರುವುದು ಖುಷಿಯ ವಿಚಾರ. ಎಸ್ ಡಿ ಎಮ್ ಸಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಹಾಗೂ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅಡುಗೆ ಮಾಡುವವರು ಜಾಗ್ರತೆ ವಹಿಸಿ ಮಕ್ಕಳ ಆರೋಗ್ಯ ಕಾಪಾಡಬೇಕೆಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಎಚ್.ಡಿ. ರಾಯರಡ್ಡಿ, ಗ್ರಾಪಂ ಸದಸ್ಯರಾದ ಬಾಪುಗೌಡ ಹಿರೇಗೌಡ್ರ, ಪ್ರಧಾನ ಗುರು ವಿ.ಜಿ. ಬೋಗಾರ, ಸಹ ಶಿಕ್ಷಕರಾದ ಎ.ಜಿ. ಅರಗಂಜಿ, ಬಿ. ಎಸ್. ಮಾಳಣ್ಣವರ, ಜಿ.ಎಸ್. ಮೂಗನೂರ, ಎಸ್.ಐ. ತಳವಾರ, ಎಂ.ಎ ದಳವಾಯಿ, ಹಿರಿಯರಾದ ಬಸನಗೌಡ ಮುದಿಗೌಡ್ರ, ಅಡಿವೆಪ್ಪ ಮರಿಯಣ್ಣವರ, ಅಡುಗೆ ಸಹಾಯಕಿಯರು ಉಪಸ್ಥಿತರಿದ್ದರು.