ಬೀದಿ ಬದಿ ವ್ಯಾಪಾರಸ್ಥರಿಂದ ಹಣ ವಸೂಲಿ; ಇಬ್ಬರು ಪೊಲೀಸರು ಅಮಾನತು

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ರಸ್ತೆ ಬದಿ ವ್ಯಾಪಾರಿಗಳಿಂದ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಪೊಲೀಸರಿಬ್ಬರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತಾ ಆದೇಶ ಹೊರಡಿಸಿದ್ದಾರೆ.

ಎಎಸ್ಐ ಕುಮಾರಸ್ವಾಮಿ ಹಾಗೂ ಪಿಸಿಆರ್ ವಾಹನ ಚಾಲಕ ಪೇದೆ ಮಣಿಕಂಠ ಅಮಾನತು ಆಗಿದ್ದಾರೆ.

ನಗರದ ಗಾಂಧಿ ಚೌಕ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರಿಂದ ಇಬ್ಬರು ಪೊಲೀಸರು ಹಣ ವಸೂಲಿ ಮಾಡುತ್ತಿದ್ದುದ್ದನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವೀಡಿಯೋ ವೈರಲ್ ಮಾಡಿದ್ದರು. ಹಣ ಪೀಕುತ್ತಿದ್ದ ವಿಡಿಯೋ ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಚಂದ್ರಗುಪ್ತಾ ಅವರು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here