ಬುಧವಾರವೂ ಸೋಂಕಿನ ಆರ್ಭಟ; 458 ಜನರಿಗೆ ಸೋಂಕು; ನಾಲ್ವರು ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯಲ್ಲಿ ಸೋಂಕಿನ ಆರ್ಭಟ ಮುಂದುವರೆದಿದೆ. ನಿನ್ನೆ ಮತ್ತು ಇವತ್ತು ನಾಲ್ಕು ನೂರರ ಗಡಿ ದಾಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಅದರಲ್ಲೂ ಸೋಂಕು ಹಳ್ಳಿ ಹಳ್ಳಿಗೂ ವ್ಯಾಪಿಸುತ್ತಿದ್ದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಮೇ 12 ಬುಧವಾರ ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 458 ಜನರಿಗೆ ಸೋಂಕು ತಗುಲಿದೆ. ನಾಲ್ವರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.

ಇಂದು 458 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 15986 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -221, ಮುಂಡರಗಿ-71, ನರಗುಂದ-19, ರೋಣ-89, ಶಿರಹಟ್ಟಿ-44, ಹೊರಜಿಲ್ಲೆಯ-10 ಸೇರಿದಂತೆ 458 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿ ಅಂತೆ ನಾಲ್ವರು ಮೃತಪಟ್ಟಿದ್ದಾರೆ.

ಮೃತ ನಾಲ್ವರು ಬೆಟಗೇರಿ ಭಾಗದ ನಿವಾಸಿಗಳು ಅನ್ನೋದು ಗಾಬರಿ ತರಿಸಿದೆ.

ಬೆಟಗೇರಿ ಭಾಗದ ನಿವಾಸಿ 69 ವರ್ಷ ವಯಸ್ಸಿನ ಮಹಿಳೆ, ಮೇ 06 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಬೆಟಗೇರಿಯ ನಿವಾಸಿ 60 ವರ್ಷದ ಮಹಿಳೆ ಮೇ 12 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಬೆಟಗೇರಿಯ 67 ವರ್ಷದ ಮಹಿಳೆ ಮೇ 11 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಬೆಟಗೇರಿ ಭಾಗದ 75 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೇ 09 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹೇಳಿದ್ದಾರೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
167 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 280 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 13986 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1910 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 169 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here