ಬುಧವಾರ ಮತ್ತೆ ಸೋಂಕು ಸ್ಫೋಟ; ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ, ನಾಲ್ವರ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯಲ್ಲಿ ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿತ್ತು. ಆದರೆ ಇವತ್ತು ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ತುಸು ಆತಂಕಕ್ಕೆ ಕಾರಣವಾಗಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು ಕೇವಲ 11 ಜನ ಮಾತ್ರ ಹೆಚ್ಚು.

ಇಂದಿನ 393 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 22058 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -177, ಮುಂಡರಗಿ-41, ನರಗುಂದ-25, ರೋಣ-73, ಶಿರಹಟ್ಟಿ-73, ಹೊರಜಿಲ್ಲೆಯ-04 ಸೇರಿದಂತೆ 393 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 226 ಕ್ಕೇರಿದೆ.

ಮುಂಡರಗಿ ತಾಲೂಕಿನ ಹೈತಾಪೂರ‌ ನಿವಾಸಿ
60 ವರ್ಷದ ಮಹಿಳೆ ಮೇ-22 ರಂದು ಮುಂಡರಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 2,4 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 68 ವರ್ಷದ ವ್ಯಕ್ತಿ ಮೇ -18 ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 25 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಬೆಟಗೇರಿ ನಿವಾಸಿ 56 ವರ್ಷದ ಮಹಿಳೆ ಮೇ 21 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 26 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಕುರ್ತಕೋಟಿ ನಿವಾಸಿ 80 ವರ್ಷದ ಮಹಿಳೆ ಮೇ 22 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 26 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 404 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 18792 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 3040 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 193 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here