ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಬೃಹತ್ ಮೊತ್ತದ ಟೆಂಡರ್ಗಳನ್ನು ವಿಂಗಡಿಸಿ ಉಪವಿಭಾಗವಾರು ಮಟ್ಟದಲ್ಲಿ ಸ್ಥಳೀಯ ವಿದ್ಯುತ್ ಗುತ್ತಿಗೆದಾರರಿಗೆ ನೀಡಲು ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ಹುಬ್ಬಳ್ಳಿಯ ಹೆಸ್ಕಾಂ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.
ಈ ಕುರಿತು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ರವೀಂದ್ರ ಬಿ. ಜೋಗಿನ್, ಹೆಸ್ಕಾಂದಿಂದ ಸ್ಥಳೀಯ ವಿದ್ಯುತ್ ಗುತ್ತಿಗೆದಾರರು ಯಾವುದೇ ರೀತಿಯ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯಿಂದ ಉಪಜೀವನ ನಿರ್ವಹಿಸಲು ಸಹಾಯ ದೊರಕಿರುವುದಿಲ್ಲ. ಬೃಹತ್ ಮೊತ್ತದ ಟೆಂಡರ್ಗಳನ್ನು ಕರೆದು ಬಂಡವಾಳಶಾಹಿಗಳಿಗೆ ನೀಡುವುದರಿಂದ ಸ್ಥಳೀಯ ಸಾಮಾನ್ಯ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದರು.
ಬೃಹತ್ ಕಾಮಗಾರಿಗಳನ್ನು ಬಂಡವಾಳಶಾಹಿಗಳು ಕಾರ್ಯವೈಖರಿಯ ಬಗ್ಗೆ ಇಲಾಖೆಗೆ ಸಂಪೂರ್ಣ ಮಾಹಿತಿ ಇದೆ. ಇಲಾಖೆಯು ೧ರಿಂದ ೫ ಲಕ್ಷದ ವರೆಗಿನ ಕಾಮಗಾರಿಗಳನ್ನು ಟೆಂಡರ್ ಕರೆಯದೇ ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಇದರಿಂದ ಗುಣಮಟ್ಟದ ಕಾಮಗಾರಿ ಆಗುವುದು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿವೆ ಎಂದರು.
ಅಭಿವೃದ್ಧಿ ಹೊಂದದೇ ಇರುವ ಬಡಾವಣೆಗಳಲ್ಲಿ ನಿರ್ಮಿಸಿದ ಮನೆಗಳಲ್ಲಿ ವಿದ್ಯುತ್ ಸಂಪರ್ಕ ನೀಡಲು ಕೆ.ಇ.ಆರ್.ಸಿ ೧೦ನೇ ತಿದ್ದುಪಡಿಯ ನಿಬಂಧನೆ ಪ್ರಕಾರ ವಿದ್ಯುತ್ ಸಂಪರ್ಕಕಕ್ಕೆ ಮಂಜೂರಿ ನೀಡದೆ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕಡತವನ್ನು ಹಿಂದಿರುಗಿಸುವುದು ಆದರೆ ಇನ್ನೊಬ್ಬ ಗ್ರಾಹಕನಿಗೆ ಇದೇ ಕೆ.ಇ.ಆರ್.ಸಿ ಪ್ರಕಾರ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಿದೆ. ಇಂತಹ ಮಲತಾಯಿ ಧೋರಣೆ ಅನುಸರಿಸುವುದು ಸರಿಯಲ್ಲ ಎಂದರು.
ಹೆಸ್ಕಾಂ ಗದಗ ವಿಭಾಗೀಯ ಉಗ್ರಾಣದಲ್ಲಿ ಸ್ಥಳೀಯ ಗುತ್ತಿಗೆ ಕಾಮಗಾರಿ ನಿರ್ವಹಿಸಲು ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿಗಳಿಗೆ ಬೇಕಾಗುವ ಸಾಮಗ್ರಿಗಳನ್ನು ಉಗ್ರಾಣ ಅಧಿಕಾರಿಗಳು ಸರಿಯಾಗಿ ಪೂರೈಸುತ್ತಿಲ್ಲ ಎಂದರು. ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಸದಸ್ಯರು ಉಪಸ್ಥಿತರಿದ್ದರು.
Trending Now



