ಬೆಳಗಾವಿ ಲೋಕಸಭಾ ಉಪ ಚುನಾವಣೆ, ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದರೆ ಒಳ್ಳೆಯದು: ಸಚಿವ ಜಾರಕಿಹೊಳಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

Advertisement

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಟಿಕೆಟ್ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದರೆ ಒಳ್ಳೆಯದು. ಆದರೆ, ಆ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಅವರ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಸವರಾಜ್ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಇಲ್ಲಾ. ಮುಂದಿನ ಎರಡೊರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, ಮಂಗಳೂರು ಸಮಸ್ಯೆಗಳೇ ಬೇರೆ, ಬೆಳಗಾವಿ ಸಮಸ್ಯೆಯೇ ಬೇರೆ ಇದೆ. ಇದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದ ಸಚಿವರು, ಬೆಳಗಾವಿಯಲ್ಲಿ ಕಾಂಗ್ರೆಸ್ ಮರಾಠಿಗರ ಓಲೈಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಪ್ರತಿಕ್ರಿಯೆ ಮಾಡುವುದಿಲ್ಲ ಎಂದರು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಸಾಹುಕಾರ ಪಡೆ ಕ್ಯಾಲೆಂಡರ್ ವಿತರಣೆ ಕುರಿತು ಪ್ರತಿಕ್ರಿಸಿದ ಅವರು, ಕ್ಯಾಲೆಂಡರ್ ವಿತರಿಸಿದರೆ ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದ ಸಚಿವರು, ಮುಂಬರುವ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಬಿಜೆಪಿಗೆ ವಶಪಡಿಸಿಕೊಳ್ಳುತ್ತೇವೆ. ಅಲ್ಲಿ ಗೆಲ್ಲಲೇಬೇಕೆಂಬ ಸಂಕಲ್ಪ ಮಾಡಿದ್ದೇವೆ. ಪಕ್ಷದಲ್ಲಿನ ಅಡೆ ತಡೆಗಳನ್ನು ಸಿಎಂ ನೋಡಿಕೊಳ್ಳುತ್ತಾರೆ. ಸ್ಥಳೀಯ ಶಾಸಕರ ಜೊತೆ ಸೇರಿ ಎಲ್ಲ ಕಡೆ ಸಂಚರಿಸಿ ನೀರಾವರಿಗೆ ಒತ್ತು ಕೊಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here