ವಿಜಯಸಾಕ್ಷಿ ಸುದ್ದಿ, ನವಲಗುಂದ:
ಹದಿ ಹರೆಯದ ಹುಡುಗ ಹುಡುಗಿಯ ನಡುವೆ ಪ್ರೇಮಾಂಕುರವಾಗಿ ಇನ್ನೇನು ಮದುವೆ ಮಾಡಿಕೊಳ್ಳೊಣ ಎನ್ನುವಷ್ಟರಲ್ಲಿ ಹುಡುಗಿಯ ಮನೆಯವರು ಬೇರೊಬ್ಬ ಯುವಕನೊಂದಿಗೆ ಮದುವೆಗೆ ಮೂಹುರ್ತ ನಿಗದಿ ಮಾಡಿದ್ದನ್ನು ಸಹಿಸಿಕೊಳ್ಳಲಾಗದೇ ಪ್ರೇಮಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಗಳವಾರ ನಡೆದಿದೆ.
ನವಲಗುಂದ ತಾಲ್ಲೂಕಿನ ತಡಹಾಳ ಗ್ರಾಮದ ಕುರುಬ ಜಾತಿಗೆ ಸೇರಿದ ಸಾವಿತ್ರಿ ಮುತ್ತಪ್ಪ ನರಗುಂದ (20) ಪರಿಶಿಷ್ಟ ಜಾತಿಗೆ ಸೇರಿದ ಯುವಕ ಮಲ್ಲಪ್ಪ ದುರ್ಗಪ್ಪ ಮಾದರ (23) ವಿಷ ಸೇವಿಸಿದ ಅನ್ಯಜಾತಿಯ ಪ್ರೇಮಿಗಳಾಗಿದ್ದಾರೆ.
ಸೋಮವಾರ ರಾತ್ರಿ ಇಬ್ಬರನ್ನು ಇಲ್ಲಿಯ ಸರ್ಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸಗೆ ಕಳುಹಿಸಿಕೊಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸೋಮವಾರ ರಾತ್ರಿ ಮೃತಪಟ್ಟರೇ, ಯುವಕ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.