ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರು ಕಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದವರನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಪಾಟೀಲ್ ಮಾನವೀಯತೆ ಮೆರೆದ ಘಟನೆ ಭಾನುವಾರ ಜರುಗಿದೆ.

ಉಣಕಲ್ ಕೆರೆಯ ಎದುರಿಗಿರುವ ಪ್ರೆಸಿಡೆಂಟ್ ಹೋಟೆಲ್ ಮುಂಭಾಗದಲ್ಲಿ ಬಂದೋಬಸ್ತಗಾಗಿ ನಿಂತಿದ್ದ ಪೊಲೀಸರಿಂದ ತಪ್ಪಿಸಿಕೊಂಡು,
ಹೋಗಲು ಯತ್ನಿಸಿದ ಬೈಕ್ ಸವಾರರಿಬ್ಬರು ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು.

ಆದ್ರೆ ಅದೇ ಮಾರ್ಗವಾಗಿ ಬರುತ್ತಿದ್ದ ಮಾಜಿ ಮೇಯರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಪಾಟೀಲ್, ಬೈಕ್ ಸವಾರರಿಬ್ಬರು ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದಾಗ ತಮ್ಮದೇ ವಾಹನದಲ್ಲಿ ಅವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ತಮ್ಮ ವೈಯಕ್ತಿಕ ಕೆಲಸವನ್ನು ಲೆಕ್ಕಿಸದೆ ಯುವಕರ ಪ್ರಾಣ ಉಳಿಸಲು ಮುಂದಾದ ಅನಿಲಕುಮಾರ ಪಾಟೀಲ ಕಾರ್ಯಕ್ಕೆ ಸಾರ್ವಜನಿಕರು ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.