ವಿಜಯಸಾಕ್ಷಿ ಸುದ್ದಿ, ಬೆಳಗಾವಿ
- ಪರ್ಯಾಯ ಸಂಚಾರಕ್ಕೆ ಅಗತ್ಯ ಕ್ರಮ
- ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ
ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆಯಿಂದಾಗಿ 26 ಜಿಲ್ಲಾ ಮುಖ್ಯ ರಸ್ತೆ, 21 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತಗೊಂಡಿದ್ದು, ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ ಎಂದು ಡಿಸಿಎಂ ಹಾಗೂ ಲೋಕೋಪಯೋಗಿ ಸಚಿವ ಗೋವೀಂದ ಕಾರಜೋಳ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ 24 ಗಂಟೆಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ 26 ಜಿಲ್ಲಾ ಮುಖ್ಯ ರಸ್ತೆ, 21 ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ತುರ್ತು ರಸ್ತೆ ರಿಪೇರಿಗೆ 50 ಕೋಟಿ ರೂಪಾಯಿ ಬೇಕಾಗುತ್ತದೆ. ಎಂದು ತಿಳಿಸಿದರು.

ಬೆಳಗಾವಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆ ಸೇರಿ 400 ಕೋಟಿಯಷ್ಟು, ರಸ್ತೆ, ಸೇತುವೆಗಳಿಗೆ ಹಾನಿ ಆಗಿದೆ. ಹಣ ಬಿಡುಗಡೆಗೆ ಸಿಎಂ ನೇತೃತ್ವದ ಸಭೆಯಲ್ಲಿ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು.
ಕಳೆದ 24 ಗಂಟೆಯಲ್ಲಿ 300ಮಿಮೀಗಿಂತ ಹೆಚ್ಚು ಮಳೆ ಆಗಿದೆ. ಕೊಯ್ನಾ ಡ್ಯಾಂ ಅಧಿಕಾರಿಗಳ ಜತೆಗೆ ನಿರಂತರ ಸಂಪರ್ಕ ಹೊಂದಿದ್ದು,
ಜನರಿಗೆ ತೊಂದರೆ ಆಗದಂತೆ ಕಾಳಜಿ ಕೇಂದ್ರ, ಜಾನುವಾರು ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.
ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ ಎಂದು ಕಾರಜೋಳ ತಿಳಿಸಿದರು.