ಭಾರಿ ಮಳೆ ಗಾಳಿಗೆ ಧರೆಗುರುಳಿದ ಮರಗಳು

0
Spread the love

ವಿಜಯಸಾಕ್ಷಿ ಸುದ್ದಿ, ನವಲಗುಂದ:

Advertisement

ಸಂಜೆ ಸುರಿದ ಭಾರಿ ಮಳೆ ಸಹಿತ ಬಿರುಗಾಳಿಗೆ ಪಟ್ಟಣದ ಜನನಿಬೀಡ ಪ್ರದೇಶದಲ್ಲಿ ಹೆಚ್ಚು ಮರಗಳು ನೆಲಕ್ಕುರುಳಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಸಂಜೆ ಬೀಸಿದ ಬಿರುಗಾಳಿಗೆ ಪಟ್ಟಣದ ಮಿನಿ ವಿಧಾನಸೌದ, ಮಾಡೆಲ್ ಹೈಸ್ಕೂಲ್ ಆವರಣ ಹಾಗೂ ಲಿಂಗರಾಜ ವೃತ್ತದ ಬಳಿಯ ರೈತ ಭವನದ ಮುಂದೆ ಗಿಡಗಳು ನೆಲಕ್ಕುರಳಿದ್ದು ಕಂಡುಬಂತು.

ಇದರಿಂದಾಗಿ ಘಟನಾ ಸ್ಥಳಗಳಿಗೆ ಆಗಮಿಸಿದ್ದ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬದ ಮೇಲೆ ಬಿದ್ದಿದ್ದ ಮರಗಳನ್ನು ತ್ವರಿತವಾಗಿ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಕಂಡುಬಂತು.

ಆದರೂ 4 ಗಂಟೆಗೂ ಹೆಚ್ಚುಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಕಂಡುಬಂತು.


Spread the love

LEAVE A REPLY

Please enter your comment!
Please enter your name here