ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ
Advertisement
ಹೃದಯಾಘಾತದಿಂದ ಹೆಂಡತಿ ಸಾವನ್ನಪ್ಪಿದ್ದಕ್ಕೆ ಮನನೊಂದ ಪತಿ ಹಾಗೂ ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಚನ್ನವ್ವ ರಂಗಾಪುರೆ(40) ಹೃದಯಾಘಾತದಿಂದ ಕಳೆದ ಒಂದು ವಾರದ ಹಿಂದೆಯೇ ಸಾವನ್ನಪ್ಪಿದ್ದರು.
ಆದರೆ, ಅವರ ಸಾವನ್ನು ಕುಟುಂಬಸ್ಥರಿಗೆ ಅರಗಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ಇಂದು ಪತಿ ಕಾಡಪ್ಪ(47), ಕೀರ್ತಿ(20), ಸ್ಪೂರ್ತಿ(18) ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎಲ್ಲರೂ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದಾಗಿ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.