ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭಿಸಲಾಗಿತ್ತು. ಸದ್ಯ ಈ ಸಾಲಿಗೆ ಮತ್ತೆ ನಾಲ್ಕು ಜಿಲ್ಲೆಗಳು ಸೇರ್ಪಡೆಗೊಂಡಿವೆ.
ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ, ದಾವಣಗೆರೆ ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಜಿಲ್ಲೆಗಳಲ್ಲಿ ಕೂಡ ಸಂಜೆ 5ರ ವರೆಗೆ ಅಂಗಡಿ – ಮುಂಗಟ್ಟು ತೆರೆಯಲು ಸರ್ಕಾರ ಅವಕಾಶ ನೀಡಿದೆ.
ನಿನ್ನೆಯಷ್ಟೇ ಸರ್ಕಾರ 6 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಿ ಘೋಷಿಸಿತ್ತು. ಇದರ ಬೆನ್ನಲ್ಲಿಯೇ ಸದ್ಯ ಮತ್ತೆ ನಾಲ್ಕು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಿಗೆ ನಿನ್ನೆಯಷ್ಟೇ ಅನ್ ಲಾಕ್ ನಿಯಮ ಜಾರಿಗೊಳಿಸಲಾಗಿತ್ತು. ಇಂದು ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಸಡಿಲಿಕೆ ಘೋಷಣೆಯಾಗಿದೆ.
ಈ ಮೊದಲು ಅನ್ಲಾಕ್ ಪ್ರಕಿಯೆಗೆ ಚಾಲನೆ ನೀಡಿದ್ದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಹಾಗೂ ಧಾರವಾಡ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಿದ್ದರು.