ಮನಗೂಳಿಯವರು ಮಗನ ಜವಾಬ್ದಾರಿ ನನಗೆ ವಹಿಸಿದ್ದಾರೆ: ಡಿಕೆಶಿ

0
Spread the love

Advertisement

ವಿಜಯಸಾಕ್ಷಿ ಸುದ್ದಿ, ಕಲಬುರಗಿ


ಮನಗೂಳಿ ಅವರು ಇಂದು ನಮ್ಮ ಮಧ್ಯೆ ಇಲ್ಲ, ಅವರ ಮಗ ಇದ್ದಾರೆ. ನಮ್ಮ ಮಗನ ಜವಾಬ್ದಾರಿ ನಿಮ್ಮದು. ನಿಮ್ಮ ಮಡಿಲಿಗೆ ನನ್ನ ಮಗನನ್ನು ಹಾಕಿದ್ದೇನೆ ಎಂದು
ಸಾಯುವ ಮುನ್ನ ಸ್ವತಃ ಮನಗೂಳಿ ಅವರೇ ಹೇಳಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಮಾಜಿ ಸಚಿವ ಕುಮಾರಸ್ವಾಮಿ ಅವರು ಸಾಯುವ ಮುನ್ನ ಡಿಕೆಶಿಯನ್ನು ಭೇಟಿ ಮಾಡಿರಲಿಲ್ಲ ಎಂಬ ಹೇಳಿಕೆಗೆ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಂದಗಿ ಮತ್ತು ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ನಾವು ಜಾತಿ ಮೇಲೆ ಲೆಕ್ಕಾಚಾರ ಇಟ್ಟು ರಾಜಕೀಯ ಮಾಡಲ್ಲ, ನೀತಿ ಮೇಲೆ ರಾಜಕೀಯ ಮಾಡುತ್ತೇವೆ. ಅಲ್ಪಸಂಖ್ಯಾತರು ಪ್ರಜ್ಞಾವಂತರಿದ್ದಾರೆ. ಯಾರಿಗೆ ಮತ ಹಾಕಿದರೆ ಯೋಗ್ಯ ಎಂಬುದು ಅವರಿಗೆ ಗೊತ್ತಿದೆ ಎಂದು ಹೇಳಿದರು.

ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ, ತಿಳಿದುಕೊಂಡು ಮಾತನಾಡುವೆ ಎಂದ ಅವರು, ಸಲೀಂ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಡಿ.ಕೆ. ಶಿವಕುಮಾರ್ ನಿರಾಕರಿಸಿದರು.


Spread the love

LEAVE A REPLY

Please enter your comment!
Please enter your name here