ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಲ್ಲು ಎಸೆದ ಕಿಡಿಗೇಡಿಗಳು!

0
Spread the love

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ

Advertisement

ಕೊರೊನಾ ಸಂದರ್ಭದಲ್ಲಿ ಖಾಲಿ ಕುಳಿತುಕೊಳ್ಳಲಾರದ ಕಿಡಿಗೇಡಿಗಳು ಮಧ್ಯರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿ ವಿಕೃತಿ ಮೆರೆದಿದ್ದಾರೆ. ನಗರದ ಸಿದ್ದಯ್ಯ ರಸ್ತೆ ಹಾಗೂ ಎಂಕೆಕೆ ರಸ್ತೆಯಲ್ಲಿನ ಮನೆಗಳ ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಆಟೋಗಳ ಗ್ಲಾಸ್ ಗಳನ್ನು ಒಡೆದು ಕಿಡಿಗೇಡಿಗಳು ಪುಡಿ ಪುಡಿ ಮಾಡಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ಕಿಡಿಗೇಡಿಗಳು ಇಂತಹ ಕೃತ್ಯ ಎಸಗಿದ್ದಕ್ಕೆ ಪೊಲೀಸರಿಗೆ ತಲೆನೋವು ಉಂಟಾಗಿದೆ. ಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಕಿಡಿಗೇಡಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಈ ಘಟನೆಯಲ್ಲಿ 11 ಕಾರು ಹಾಗೂ 1 ಆಟೋ ದ್ವಿಚಕ್ರ ವಾಹನ ಜಖಂ ಆಗಿವೆ. ಅಲ್ಲದೇ, ಕಾಡಾ ಅಧ್ಯಕ್ಷರ ಕಾರು ಕೂಡ ಜಖಂ ಆಗಿದೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅನುಮಾನ ವ್ಯಕ್ತಪಡಿಸಿ ಈಗಾಗಲೇ ಇಬ್ಬರು ಯುವಕರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇಂತಹ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here