HomeCrime Newsಮರ್ಯಾದೆ ಹತ್ಯೆಯಿಂದ ಬೆಚ್ಚಿ ಬಿದ್ದ ವಿಜಯಪುರ!

ಮರ್ಯಾದೆ ಹತ್ಯೆಯಿಂದ ಬೆಚ್ಚಿ ಬಿದ್ದ ವಿಜಯಪುರ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಅನ್ಯ ಕೋಮಿನ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಅಪ್ರಾಪ್ತ ಬಾಲಕಿಯ ತಂದೆಯೇ ಸ್ವಂತ ಮಗಳು ಹಾಗೂ ಆಕೆಯ ಪ್ರಿಯಕರನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಗಡಿ ಗ್ರಾಮ ಸಲಾದಹಳ್ಳಿಯಲ್ಲಿ ಈ ಘನಘೋರ ಕೃತ್ಯ ನಡೆದಿದೆ. ಗ್ರಾಮದ ಯುವಕ ಬಸವರಾಜ ಬಡಿಗೇರ (19) ಹಾಗೂ ಪಕ್ಕದ ಗ್ರಾಮ ಖಾನಾಫುರದ ಅಪ್ರಾಪ್ತ ಬಾಲಕಿ ಕೊಲೆಯಾದವರು.

ಅಪ್ರಾಪ್ತ ಬಾಲಕಿಯು ಇಂದು ತನ್ನ ಪ್ರಿಯಕರ ಬಸವರಾಜ ಬಡಿಗೇರನನ್ನು ಭೇಟಿ ಮಾಡಿದ್ದಳು. ಈ ಸಂದರ್ಭದಲ್ಲಿ ಇಬ್ಬರನ್ನೂ ಒಟ್ಟಿಗೆ ಕಂಡ ಬಾಲಕಿಯ ತಂದೆ ಇಬ್ಬರನ್ನೂ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಅಕ್ಕಪಕ್ಕದ ಗ್ರಾಮದವರಾದ ಬಸವರಾಜ್ ಹಾಗೂ ಅಪ್ರಾಪ್ತ ಬಾಲಕಿ ಅನ್ಯಕೋಮಿನವರಾದರೂ ಇಬ್ಬರ ಮಧ್ಯೆ ಈ ಹಿಂದೆ ಸ್ನೇಹ ಉಂಟಾಗಿ ಅದು ಪ್ರೇಮಾಂಕುರಕ್ಕೆ ತಿರುಗಿತ್ತು. ಆದರೆ, ಇವರಿಬ್ಬರ ಪ್ರೇಮಕ್ಕೆ ಬಾಲಕಿಯರ ಮನೆಯವರ ತೀವ್ರ ವಿರೋಧವಿತ್ತು.
ಇಷ್ಟಾದರೂ ಬಸವರಾಜ್ ಹಾಗೂ ಅಪ್ರಾಪ್ತೆ ನಡುವೆ ಪ್ರೀತಿ ಕಡಿಮೆಯಾಗಿರಲಿಲ್ಲ. ಇಂದು ಇಬ್ಬರು ಪ್ರೇಮಿಗಳು ಸಲಾದಹಳ್ಳಿ ಗ್ರಾಮದ ಹೊರ ಭಾಗದಲ್ಲಿ ಒಟ್ಟಿಗೆ ಇದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅಪ್ರಾಪ್ತೆಯ ಬಾಲಕಿಯ ತಂದೆ, ಇಬ್ಬರನ್ನು ನೋಡಿ ಕೋಪಗೊಂಡು ಕೊಲೆ ಮಾಡಿದ್ದಾನೆ.

ಸುದ್ದಿ ತಿಳಿದು ಸ್ಥಳಕ್ಕೆ ಕಲಕೇರಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಘಟನೆಯಿಂದಾಗಿ ಸಲಾದಹಳ್ಳಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!