ಮಳೆಯಿಂದ ಕುಸಿದ ಮನೆ, ಪರಿಹಾರಕ್ಕೆ ಆಗ್ರಹ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ
ಪಟ್ಟನದಲ್ಲಿ ಅತಿಯಾಗಿ ಮಳೆ ಆಗಿರುವುದರಿಂದ ಮಣ್ಣಿನ ಮನೆಗಳು ನೀರಿಗೆ ನೆನೆದು ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.
ಇಲ್ಲಿಯ ಭಜಂತ್ರಿ ಓಣಿಯ ರಾಜಾಭಕ್ಷಿ ಅಚ್ಚಳ್ಳಿ ಅವರ ಮನೆ ಮಾಳಿಗೆ ನೆನೆದು ಕುಸಿದು ಬಿದ್ದಿದೆ. ಸ್ವಲ್ಪದರಲ್ಲಿಯೇ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಂಡರಗಿ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಸಾಕಷ್ಟು ಮನೆಗಳು ಕುಸಿದು ಬಿದ್ದಿವೆ. ಕುಟುಂಬಗಳು ಬೀದಿ ಪಾಲಾಗಿವೆ. ಮನೆಗಳು ಬಿದ್ದು, ಅಪಾರ ಪ್ರಮಾಣದಲ್ಲಿ ದವಸ ಧಾನ್ಯ ಬಟ್ಟೆಗಳು ಹಾಳಾಗಿದೆ. ಊಟಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ.
ತಾಲೂಕು ಆಡಳಿತ ಹಾಗೂ ಪುರಸಭೆಯವರು ಬಿದ್ದ ಮನೆ ಹಾಗೂ ಹಾನಿ ಆದ ಮನೆಗಳ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಪುರಸಭೆ ಸದಸ್ಯ ಶಿವಪ್ಪ ಚಿಕ್ಕಣವರ, ರಾಜಾಭಕ್ಷಿ ಬೆಟಗೇರಿ, ಸಂತೋಷ ಹಿರೇಮನಿ, ಶಿರಾಜ ಬೆಟಗೇರಿ, ನಾಗರಾಜ ಹೊಂಬಳಗಟ್ಟಿ, ಪರಶುರಾಮ ಸುಣಗಾರ ಮೊದಲಾದವರು ಆಗ್ರಹಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here