ಮಹಾಮಾರಿಗೆ ಮತ್ತೊಬ್ಬ ಶಿಕ್ಷಕ ಬಲಿ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಬಳ್ಳಾಪುರ

Advertisement

ಮಹಾಮಾರಿಗೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಬಲಿಯಾಗಿದ್ದು, ಆಸ್ಪತ್ರೆಯ ಎದುರೇ ಕುಟುಂಬಸ್ಥರ ಗೋಳಾಟ ಮುಗಿಲು ಮುಟ್ಟಿತ್ತು.

ಚಿಂತಾಮಣಿ ನಗರದ 48 ವರ್ಷದ ಸರ್ಕಾರಿ ಶಾಲೆಯ ಶಿಕ್ಷಕ ವೆಂಕಟೇಶಪ್ಪ ಮಹಾಮಾರಿಗೆ ಬಲಿಯಾಗಿದ್ದಾರೆ. ಅವರು ಶುಕ್ರವಾರ ಉಸಿರಾಟದ ಸಮಸ್ಯೆಯಿಂದ ಜಿಲ್ಲೆಯ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ,ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಸಾವಿಗೆ ಆಸ್ಪತ್ರೆ ವೈದ್ಯರೇ ನೇರ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ಆಸ್ಪತ್ರೆಯ ಎದುರೇ ಕಣ್ಣೀರು ಹಾಕಿದ್ದಾರೆ. ಸಮರ್ಪಕ ಸೂಕ್ತ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ನಮ್ಮ ತಂದೆ ಸಾವನ್ನಪ್ಪಿದ್ದಾರೆ ಎಂದು ಮಗ ವಂಶಿಕೃಷ್ಣ ಆರೋಪಿಸಿದ್ದಾರೆ. ವೆಂಕಟೇಶಪ್ಪ ಸಾವಿನಿಂದ ತಾಯಿ- ಮಗನ ಕಣ್ಣೀರು ಹಾಗೂ ಗೋಳಾಟ ಅಲ್ಲಿದ್ದ ಜನರ ಕಣ್ಣಲ್ಲಿ ನೀರು ಬರುವಂತೆ ಮಾಡಿತ್ತು.


Spread the love

LEAVE A REPLY

Please enter your comment!
Please enter your name here