ಮಹಾಮಾರಿಗೆ 421 ಜನ ಪೋಷಕರು ಬಲಿ? ತಬ್ಬಲಿಯಾದ ಮಕ್ಕಳೆಷ್ಟು?

0
Spread the love

ವಿಜಯಸಾಕ್ಷಿ ಸುದ್ದಿ, ಬೀದರ್

Advertisement

ಮಹಾಮಾರಿಯಿಂದಾಗಿ ಸಾಕಷ್ಟು ಕುಟುಂಬಗಳು ಬೀದಿಗೆ ಬಂದಿವೆ. ಗಡಿ ಜಿಲ್ಲೆಯಲ್ಲಿ ಈ ಸೋಂಕಿಗೆ ಬರೋಬ್ಬರಿ 420 ಜನ ಪಾಲಕರು ಬಲಿಯಾಗಿದ್ದಾರೆ. ಹೀಗಾಗಿ ಹಲವು ಮಕ್ಕಳು ತಬ್ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಸಾಕಷ್ಟು ಮಕ್ಕಳು ಈ ರೀತಿ ಅನಾಥರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 143 ಮಕ್ಕಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಕಡು ಬಡತನದ 42 ಮಕ್ಕಳನ್ನು ಬಾಲ ಸ್ವರಾಜ್ಯ ಯೋಜನೆಯಲ್ಲಿ ಸೇರಿಸಲಾಗಿದೆ.

ಸಂಪೂರ್ಣವಾಗಿ ಪೋಷಕರನ್ನು ಕಳೆದುಕೊಂಡ 5 ಅನಾಥ ಮಕ್ಕಳು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹುಮ್ನಬಾದ್ ತಾಲೂಕಿನಲ್ಲಿ 4 ಹಾಗೂ ಬೀದರ್ ನಗರದ ಓರ್ವ ಬಾಲಕ ಸೇರಿ ಜಿಲ್ಲೆಯಲ್ಲಿ ಒಟ್ಟು ಐದು ಬಾಲಕರು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಇಂತಹ ಅನಾಥ ಮಕ್ಕಳಿಗೆ ಸರ್ಕಾರದಿಂದ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕಾಗಿದ್ದು, ಸರ್ಕಾರದ ಬಾಲ ಸ್ವರಾಜ್ಯ ಯೋಜನೆಗೆ ಈ ಅನಾಥ ಮಕ್ಕಳ ಎಲ್ಲಾ ಮಾಹಿತಿ ನೀಡಲಾಗಿದೆ ಎಂದು ಮಕ್ಕಳ ರಕ್ಷಣಾಧಿಕಾರಿ ಶಂಭುಲಿಂಗಾ ಹಿರೇಮಠ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here