ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
Advertisement
ಕ್ಷುಲ್ಲಕ ಕಾರಣಕ್ಕೆ ಅಳಿಯ ಹಾಗೂ ಮಾವನ ನಡುವೆ ನಿನ್ನೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಅಳಿಯ ಮಾವನ ಕುತ್ತಿಗೆಗೆ ಬ್ಲೇಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಇಬ್ಬರ ಜಗಳ ಬಿಡಿಸಲು ಬಂದ ಮಾವನ ಮಗ ಪ್ರವಿಣ ದಳವಾಯಿ ಮೇಲೂ ಬ್ಲೇಡ್ ದಾಳಿ ಮಾಡಿದ್ದರಿಂದ ಆತನಿಗೂ ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆದರೆ ಶಿವಪ್ಪ ದಳವಾಯಿ(ಪತ್ನಿಯ ತಂದೆ) ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪದ ಜಗದೀಶ್ ಕಂಬಳಿ ಹಲ್ಲೆಯ ನಂತರ ಸ್ಥಳದಿಂದ ಪರಾರಿಯಾಗಿದ್ದ. ಗಲಾಟೆಯಲ್ಲಿ ಗಾಯಗೊಂಡಿದ್ದ ಜಗದೀಶ್ ಅಣ್ಣಿಗೇರಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಅರಿತ ಪಿಎಸ್ಐ ಎಲ್ ಕೆ ಜೂಲಕಟ್ಟಿ ಮತ್ತವರ ತಂಡ ಆರೋಪಿಯನ್ನ ವಶಕ್ಕೆ ಪಡೆದಿದೆ.