ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಶನಿವಾರವೂ ಸಾವಿನ ಸರಣಿ ಮುಂದುವರೆದಿದೆ. ಇವತ್ತು ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಐವರು ಮೃತಪಟ್ಟಿದ್ದಾರೆ. ಇವತ್ತು 307 ಜನರಿಗೆ ಸೋಂಕು ತಗುಲಿದೆ.
ಇಂದಿನ 307 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 23037 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -126, ಮುಂಡರಗಿ-47, ನರಗುಂದ-26, ರೋಣ-50, ಶಿರಹಟ್ಟಿ-48, ಹೊರಜಿಲ್ಲೆಯ-10 ಸೇರಿದಂತೆ 307 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಐವರು ಮೃತಪಟ್ಟಿದ್ದು, ಮೃತರ ಸಂಖ್ಯೆ 241 ಕ್ಕೇರಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಇಬ್ರಾಹಿಂಪೂರ ನಿವಾಸಿ 43 ವರ್ಷದ ವ್ಯಕ್ತಿ ಮೇ-26 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 27 ರಂದು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಹನುಮಾನ್ ನಹರ ನಿವಾಸಿ 31 ವರ್ಷದ ವ್ಯಕ್ತಿ, ಮೆ,22 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 24 ರಂದು ಮೃತಪಟ್ಟಿದ್ದಾರೆ.
ಗದಗ ಶಹರದ ತಾಜ್ ನಗರ ನಿವಾಸಿ 76 ವರ್ಷದ ವ್ಯಕ್ತಿ ಮೇ 25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 26 ರಂದು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಹೊಸೂರ ನಿವಾಸಿ 70 ವರ್ಷದ ಮಹಿಳೆ ಮೇ 19 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 21 ರಂದು ಮೃತಪಟ್ಟಿದ್ದಾರೆ.
ರೋಣ ತಾಲೂಕಿನ ಹೊನ್ಬಾಪೂರ ನಿವಾಸಿ 39 ವರ್ಷದ ಮಹಿಳೆ ಮೇ 11 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 24 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 400 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 19998 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 2798 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 195 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.