ವಿಜಯಸಾಕ್ಷಿ ಸುದ್ದಿ, ಧಾರವಾಡ:
ಇಲ್ಲಿನ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದ್ದು. ಬುಧವಾರ ಡಿಸೆಂಬರ್ 1 ರವರೆಗೆ ಎಸ್ಡಿಎಂ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ.
ಧಾರವಾಡ ಹಾಗೂ ಸುತ್ತಲಿನ ಜಿಲ್ಲೆಗಳಿಂದ ಹುಬ್ಬಳ್ಳಿ ಧಾರವಾಡಕ್ಕೆ ಚಿಕಿತ್ಸೆಗಾಗಿ ಬರುವ ರೋಗಿಗಳು ಇದನ್ನು ಗಮನಿಸಿ ಯೋಜನೆಗಳನ್ನು ಮರು ರೂಪಿಸಿಕೊಳ್ಳಬೇಕು ಅಥವಾ ಹುಬ್ಬಳ್ಳಿಯ ಕಿಮ್ಸ್, ಧಾರವಾಡ ಜಿಲ್ಲಾ ಆಸ್ಪತ್ರೆ ಅಥವಾ ಅವಳಿ ನಗರದ ಯಾವುದಾದರೂ ಆಸ್ಪತ್ರೆಗಳಿಗೆ ಭೇಟಿ ನೀಡಬಹುದು.
ಕೋವಿಡ್ ವೈರಾಣುವಿನ ಜಿನೋಮ್ ಸಿಕ್ವೆನ್ಸ್ ವರದಿಗಳು ಬುಧವಾರ ಕೈಸೇರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
ಮೂರು ದಿನ ಶಾಲಾ- ಕಾಲೇಜು ರಜೆ
ಧಾರವಾಡ ಸತ್ತೂರಿನ ಎಸ್ ಡಿ ಎಂ ಸುತ್ತಲಿನ 500 ಮೀಟರ್ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೆ ನಾಳೆಯಿಂದ ಡಿಸೆಂಬರ್ 1 ರವರೆಗೆ ಮೂರು ದಿನಗಳ ಕಾಲ ರಜೆ ಮುಂದುವರಿಸಲಾಗಿದೆ.
ಎಸ್ ಡಿ ಎಂ ಆವರಣದಲ್ಲಿ ಕೋವಿಡ್ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ಅವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.