ವಿಜಯಸಾಕ್ಷಿ ಸುದ್ದಿ, ಹಾವೇರಿ
ಕರ್ನಾಟಕದಲ್ಲಿ ಮಾತ್ರವಲ್ಲ ದೇಶದ ನಾನಾ ಭಾಗಗದಲ್ಲಿ ಐಟಿ ದಾಳಿ ಆಗುತ್ತದೆ. ಡೌಟ ಬಂದರೆ ದಾಳಿ ಮಾಡ್ತಾರೆ. ದಾಳಿ ರಾಜಕೀಯ ಪ್ರೇರಿತವಲ್ಲ ಎಂದು ಬಿ.ಎಸ್. ಯಡಿಯೂರಪ್ಪನವರೇ ಹೇಳಿದ್ದಾರೆ. ಅವರ ಶಕ್ತಿ ಕುಂದಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು 50 ವರ್ಷಗಳಿಂದ ಪಕ್ಷಕಟ್ಟಿ ಬೆಳೆಸಿದ್ದಾರೆ. ದಾಳಿಯಲ್ಲಿ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಪಾತ್ರ ಇಲ್ಲ ಎಂದು ಸಮರ್ಥಿಸಿಕೊಂಡರು.



