ವಿಜಯಸಾಕ್ಷಿ ಸುದ್ದಿ, ಯಾದಗಿರಿ
ಜಿಲ್ಲೆಯಲ್ಲಿ ಮೂರು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿತ್ತು. ಆದರೆ, ಇಂದು ಮತ್ತೆ ಬೆಳಿಗ್ಗೆ ಓಪನ್ ಆಗಿದೆ. ಹೀಗಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿ ಬಿದ್ದಿರುವ ದೃಶ್ಯ ಸಾಮಾನ್ಯವಾಗಿದೆ.
ಹೊಲ್ ಸೇಲ್ ಮಾರುಕಟ್ಟೆಯಲ್ಲಿ ಜನ ಜಂಗುಳಿ ತುಂಬಿ ತುಳುಕುತ್ತಿದೆ.
ಪೊಲೀಸರಿಗೂ ಡೋಂಟ್ ಕೇರ್ ಎನ್ನುತ್ತಿರುವ ಜನರು, ಸಾಮಾಜಿಕ ಅಂತರ ಮರೆತು ವ್ಯಾಪಾರ – ವಹಿವಾಟು ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಮೂರು ದಿನಗಳಿಂದ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದಿನಿಂದ ಬೆಳಿಗ್ಗೆ 6 ರಿಂದ 10ರ ವರೆಗೆ ತರಕಾರಿ ಮತ್ತು ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತ ನೀಡಿತ್ತು. ಆದರೆ, ಈ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜನರಿಗೆ ತಿಳಿಸಲಾಗಿದೆ. ಆದರೆ, ಜನರು ಮಾತ್ರ ತಮ್ಮ ಹಳೆಯ ಚಾಳಿ ಮುಂದುವರೆಸಿದ್ದಾರೆ.
ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ ಮಾರುಕಟ್ಟೆಯಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಜನ ಮಾತ್ರ ತಲೆ ಕೆಡಿಸಿಕೊಳ್ಳದೆ ಗುಂಪು, ಗುಂಪಾಗಿ ವ್ಯಾಪಾರ – ವಹಿವಾಟು ನಡೆಸಿದ್ದಾರೆ.