HomeDharwadಯೋಗದಿಂದ ಮಾನಸಿಕ ನೆಮ್ಮದಿ ಸಾಧ್ಯ; ಬಿಇಓ ಮಾಯಾಚಾರ್ಯ ಅಭಿಮತ

ಯೋಗದಿಂದ ಮಾನಸಿಕ ನೆಮ್ಮದಿ ಸಾಧ್ಯ; ಬಿಇಓ ಮಾಯಾಚಾರ್ಯ ಅಭಿಮತ

Spread the love

ವಿಜಯಸಾಕ್ಷಿ ಸುದ್ದಿ, ನವಲಗುಂದ:

ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಸಸಿಗಳನ್ನು ನೆಡಬೇಕು ಹಾಗೂ ಯೋಗದಿಂದ ಮಾನಸಿಕ ನೆಮ್ಮದಿ ಶಾರೀರಿಕ ಬೆಳವಣಿಗೆಯಾಗುವುದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಮಾಯಾಚಾರ್ಯ ಅಭಿಪ್ರಾಯಪಟ್ಟರು. ಮಂಗಳವಾರ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ನಂ.೩ ರಲ್ಲಿ ಏರ್ಪಡಿಸಿದ್ದ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ನಿರಂತರ ಕನ್ನಡ ಕಟ್ಟುವ ಕೆಲಸವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಲಿಂಗಾರಜ ಅಂಗಡಿ ಆಯ್ದ ಕೆಲವು ಶಾಲೆಗಳಿಗೆ ಕನ್ನಡಕ್ಕಾಗಿ ಕೆಲಸ ಮಾಡಿದ ಮಹನೀಯರ ಪುಸ್ತಕಗಳನ್ನು ನೀಡುವುದಾಗಿ ಹೇಳಿದರು.

ತಾಲ್ಲೂಕಾ ಕ.ಸಾಪ.ಅಧ್ಯಕ್ಷ ಎಸ್.ಎಂ.ಮೆಣಸಿನಕಾಯಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯೋಗ ಸಪ್ತಾಹ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪುರಸಭೆ ಉಪಾಧ್ಯಕ್ಷೆ ಪದ್ಮಾವತಿ ಪೂಜಾರ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ೧೨೫ ಕ್ಕೆ ೧೨೫ ಅಂಕ ಪಡೆದ ಇದೇ ಶಾಲೆಯ ವಿದ್ಯಾರ್ಥಿನಿ ಪೂರ್ಣಿಮಾ ಹಳ್ಳದ, ಪಿಯುಸಿ ವಿಜ್ಞಾನದಲ್ಲಿ ಶೇ.೯೬ ಅಂಕ ಗಳಿಸಿದ ಅಪ್ಪು ಹಾಲಗೇರಿ, ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷೆ ಪದ್ಮಾವತಿ ಪೂಜಾರ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸಣ್ಣ ಹಳ್ಳದ, ಅಡಿವೆಪ್ಪ ಶಿರಸಂಗಿ ಅವರನ್ನು ಸನ್ಮಾನಿಸಲಾಯಿತು.

ಶ್ರೀನಿವಾಸ ನವೀಂದ್ರಕರ ಸ್ವಾಗತಿಸಿದರು. ಶ್ರೀನಾಥ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದದರು, ಆರ್.ಬಿ.ಹಳ್ಳಿಕೇರಿ ಬಹುಮಾನ ವಿತರಣೆ ಮಾಡಿದರು. ವೇದವತಿ ದಂಡಿಗದಾಸರ ನಿರೂಪಿಸಿದರು. ಎಸ್.ಎಫ್. ನೀರಲಗಿ, ಎಂ.ಎನ್.ವಗ್ಗರ, ಎನ್. ವಾಯ್. ಕಳಸಾಪೂರ, ರಜಿಯಾಬೇಗಂ ಕೊಪ್ಪಳ, ಅಶೋಕ ಮದಗುಣಕಿ, ಎನ್.ಎನ್.ಹಾಲಗೇರಿ, ಆರ್.ಎನ್.ಹಾಲಗೇರಿ ಉಪಸ್ಥಿತರಿದ್ದರು.

ತಾಲ್ಲೂಕು ಆಡಳಿತದಿಂದ ಯೋಗ ದಿನಾಚರಣೆ

ಪಟ್ಟಣದ ಮಾಡೆಲ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ತಹಶೀಲ್ದಾರ್ ಅನೀಲ ಬಡಿಗೇರ ನೇತ್ರತ್ವದಲ್ಲಿ ಯೋಗ ದಿನಾಚರಣೆ ಆಚರಿಸಿ ಶಾಲಾ ವಿದ್ಯಾರ್ಥಿಗಳಿಗೆ ಯೋಗದ ಪ್ರಯೋಜನಗಳ ಕುರಿತು ಅರಿವು ಮೂಡಿಸಲಾಯಿತು. ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ಕಾಂಬಳೆ, ಮುಖ್ಯಾಧಿಕಾರಿ ವೀರಪ್ಪ ಹಸಬಿ, ಪುರಸಭೆ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!