ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ
ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಕ್ತನಿಧಿ ಕೇಂದ್ರಗಳು ಬಂದ್ ಆಗಿ ರಕ್ತದ ಅಭಾವ ಸೃಷ್ಟಿಯಾಗಿದೆ. ರಕ್ತದಾನ ಮಾಡಿ ಆಪತ್ತಿನಲ್ಲಿರುವ ವ್ಯಕ್ತಿಯ ಜೀವ ಉಳಿಸಬಹುದು ಎಂದು ಗ್ರಾ.ಪಂ.ಅಧ್ಯಕ್ಷ ಮುತ್ತು ರಾಯರಡ್ಡಿ ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯತಿ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು,
ಹೆಚ್ಚುತ್ತಿರುವ ಅಪಘಾತ ಹಾಗೂ ಕೊರೊನಾ ಭೀತಿಯಿಂದ ರಕ್ತದ ಕೊರತೆ ಕಾಡುತ್ತಿದೆ. ಆರೋಗ್ಯವಂತ ನಾಗರಿಕರು ರಕ್ತದಾನ ಮಾಡುವುದರಿಂದ ಗರ್ಭಿಣಿಯರು, ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದರು.

ಡಾ.ಪ್ರಶಾಂತ ಮಲ್ಲಾಪೂರ ಮಾತನಾಡಿ, ಮನುಷ್ಯ ರಕ್ತ ನೀಡಿದರೆ ಸಣ್ಣಗಾಗುತ್ತಾನೆ ಎಂಬ ತಪ್ಪು ಭಾವನೆ ಹೋಗಬೇಕು. ರಕ್ತದಾನದಿಂದ ಆರೋಗ್ಯದ ಮೇಲೆ ಯಾವುದೇ ರೀತಿ ಅಡ್ಡ ಪರಿಣಾಮ ಉಂಟಾಗುವುದಿಲ್ಲ ಎಂದು ಹೇಳಿದರು.

ಗ್ರಾ.ಪಂ.ಅಧ್ಯಕ್ಷ ಮುತ್ತು ರಾಯರಡ್ಡಿ, ಸದಸ್ಯ ಲಕ್ಷ್ಮಣ ಕಂಬಳಿ, ಪಿಡಿಓ ಶೈನಾಜ್ ಮುಜಾವರ್, ಪಂಚಾಯಿತಿ ಸಿಬ್ಬಂದಿ ಕೆಂಚಪ್ಪ ಮಾದರ, ಶಿವು ಯಲಿಗಾರ ಹಾಗೂ ಗ್ರಾಮದ ಯುವಕರು ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಬಾಪು ಹಿರೇಗೌಡ್ರ, ಶರಣಪ್ಪ ಹಳೇಮನಿ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ: ಭಕ್ತಿ, ಡಾ: ವಿಠ್ಠಲ, ಡಾ:ಮೋನಿತ್, ಡಾ: ಕೌಶಿಕ್, ಆಪ್ತ ಸಮಾಲೋಚಕ್ ಎಸ್ ಬಿ ಪಾಟೀಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ: ಪ್ರಶಾಂತ ಮಲ್ಲಾಪೂರ, ಸಿಬ್ಬಂದಿಗಳಾದ ಶರಾವತಿ, ಭಾಗ್ಯಜೋತಿ, ರೇಷ್ಮಾ, ಬಸಮ್ಮ, ಶಿಲ್ಪಾ, ರವಿ, ಸಂತೋಷ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಈರಣ್ಣ ಗಾಣಿಗೇರ ಕಾರ್ಯಕ್ರಮ ನಿರೂಪಣೆ ಮಾಡಿದರು.