ರಟ್ಟೀಹಳ್ಳಿ ಪಟ್ಟಣಕ್ಕೆ ಇಂದು ಮಾಜಿ ಸಿಎಂ ಹೆಚ್ಡಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ರಟ್ಟೀಹಳ್ಳಿ:

Advertisement

ಪಟ್ಟಣದ ಹೊರವಲಯದಲ್ಲಿರುವ ಪ್ಯಾಟಿಗೌಡ್ರ ಕಣದಲ್ಲಿ ಆಯೋಜಿಸಲಾಗಿರುವ ಜೆಡಿಎಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಚಿತ್ರನಟ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಆಗಮಿಸಲಿದ್ದಾರೆ.

ರಟ್ಟೀಹಳ್ಳಿ, ಹಿರೇಕೆರೂರ ತಾಲ್ಲೂಕಿನ ಜೆಡಿಎಸ್ ಅಭಿಮಾನಿಗಳು, ಕಾರ್ಯಕರ್ತರು, ರೈತರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಯಾನಂದ ಜಾವಣ್ಣನವರ್ ( ಜೆ. ಕೆ ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here