ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ ಐಟಿ ಎದುರು ಹಾಜರಾದ ಆರೋಪಿಗಳು

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪಿಗಳಾಗಿರುವ ನರೇಶ್ ಗೌಡ ಹಾಗೂ ಶ್ರವಣ್ ವಿಚಾರಣೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ತಮ್ಮ ವಕೀಲರೊಂದಿಗೆ ಆಗಮಿಸಿರುವ ಆರೋಪಿಗಳು, ಆಡುಗೋಡಿ ಟೆಕ್ನಿಕಲ್ ಸೆಲ್ ನಲ್ಲಿ ಎಸ್ ಐಟಿ ಎದುರು ಹಾಜರಾಗಿದ್ದಾರೆ. ಈ ಹಿಂದೆಯೇ ನರೇಶ್ ಮತ್ತು ಶ್ರವಣ್ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ನೊಟೀಸ್ ನೀಡಿದ್ದರು.

ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ತನಿಖೆಗೆ ಅವರು ಹಾಜರಾಗಿದ್ದಾರೆ. ಐದು ದಿನಗಳ ಒಳಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಇಬ್ಬರಿಗೂ ಸೂಚನೆ ನೀಡಿತ್ತು, ಸಿಡಿ ಕಿಂಗ್‌ ಪಿನ್‌ಗಳಾದ ನರೇಶ್ ಮತ್ತು ಶ್ರವಣ್‌ ಅವರನ್ನು ಬಂಧನದ ಅವಶ್ಯವಿದ್ದರೆ ಬಂಧಿಸುವ ಸಾಧ್ಯತೆಯೂ ಇದೆ.

ಸರಿಯಾಗಿ ಸ್ಪಂದಿಸದಿದ್ದರೆ ಬಂಧಿಸಲು ಎಸ್ ಐಟಿ ತನಿಖಾಧಿಕಾರಿಗಳಿಗೆ ಸ್ವತಂತ್ರವಿದೆ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಿರುವ ಆರೋಪಿಗಳಿಬ್ಬರನ್ನು ಎಸ್ ಐಟಿ ಪೊಲೀಸರು ತಮ್ಮ ವಶಕ್ಕೆ ಪಡೆಯಬಹುದು ಎನ್ನಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here