ರಾಜಸ್ಥಾನದ ಮಾಜಿ ಸಿಎಂ ಮಹಾಮಾರಿಗೆ ಬಲಿ!

0
Spread the love

ವಿಜಯಸಾಕ್ಷಿ ಸುದ್ದಿ, ಜೈಪುರ

Advertisement

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ(89) ಇಂದು ಮಹಾಮಾರಿಗೆ ಬಲಿಯಾಗಿದ್ದಾರೆ. 1980-81 ರಲ್ಲಿ ಇವರು ರಾಜಸ್ಥಾನದ ಸಿಎಂ ಆಗಿದ್ದರು. ಆನಂತರ ಹರಿಯಾಣ ಹಾಗೂ ಬಿಹಾರದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.
ಮಾಜಿ ಸಿಎಂ ಅವರ ಸಾವಿನ ಕುರಿತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಅಲ್ಲದೇ, ಸಂತಾಪ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಗುರುವಾರ ಒಂದು ದಿನ ಶೋಕಾಚರಣೆಯನ್ನು ಕೂಡ ಘೋಷಿಸಿದೆ. ಅಲ್ಲದೇ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧದಷ್ಟು ಹಾರಿಸಲಾಗುತ್ತಿದೆ.
ಪಹಾಡಿಯಾ ಅವರಿಗೆ ಸಂತಾಪ ಸೂಚಿಸಲು ಇಂದು ಮಧ್ಯಾಹ್ನ 12ಕ್ಕೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಅಂದೇ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here