ರಾಜ್ಯದಲ್ಲಿ ಇಂದಿನಿಂದ ಕಠಿಣ ಲಾಕ್ ಡೌನ್!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಇಂದಿನಿಂದ ಮತ್ತೆ ಲಾಕ್ ಡೌನ್ ಜಾರಿಯಾಗಿದೆ. ಮೇ. 10ರಂದು ಘೋಷಣೆಯಾಗಿದ್ದ ಲಾಕ್ ಡೌನ್ ಅಂತ್ಯವಾಗಬೇಕಿತ್ತು. ಆದರೆ, ಕೊರೊನಾ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಸರ್ಕಾರ ಇನ್ನೂ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಈ ಲಾಕ್ ಡೌನ್ ನ್ನು ಕಠಿಣಗೊಳಿಸಲಾಗಿದೆ.

ಇಂದಿನಿಂದ ಜೂ. 7ರ ವರೆಗೆ ಬೆಳಿಗ್ಗೆ 6ರ ವರೆಗೆ 2ನೇ ಹಂತದ ಲಾಕ್ಡೌನನ್ ಜಾರಿಯಲ್ಲಿರಲಿದೆ. ವಿಮಾನ ಮತ್ತು ರೈಲುಗಳಲ್ಲಿ ಪ್ರಯಾಣಕ್ಕೆ ಅವಕಾಶ ಇದೆ. ದಿನಸಿ ಖರೀದಿಗೆ ಬೆಳಿಗ್ಗೆ 10ರವರೆಗೆ ಅವಕಾಶ ನೀಡಲಾಗಿದೆಯಾದರೂ ಆಯಾ ಜಿಲ್ಲೆಯಲ್ಲಿ ಕೆಲವು ಬದಲಾವಣೆಗಳಾಗಿವೆ.
ಧಾರವಾಡ ಜಿಲ್ಲೆಯಲ್ಲಿ ಇಂದು ಮಾತ್ರ ದಿನಸಿ ಖರೀದಿಗೆ ಅನುಮತಿ ಇದ್ದು, ನಾಳೆಯಿಂದ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಇನ್ನುಳಿದಂತೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಡಳಿತ ಬೇರೆ ಬೇರೆ ನಿರ್ಧಾರ ಕೈಗೊಂಡಿವೆ. ಕೆಲವು ಜಿಲ್ಲೆಗಳಲ್ಲಿ ವಾರದಲ್ಲಿ ಎರಡು ದಿನ ದಿನಸಿ ಖರೀದಿಗೆ ಅವಕಾಶ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here