ವಿಜಯಸಾಕ್ಷಿ ಸುದ್ದಿ, ಬೆಂಗಳೂರು
Advertisement
ಇಂದು ರಾಜ್ಯದಲ್ಲಿ 22,823 ಜನರಲ್ಲಿ ಸೋಂಕು ಕಾಣಿಸಿಕೊಡಿದೆ. ಅಲ್ಲದೇ, ಇಂದು 401 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಅಲ್ಲದೇ, ಇಂದು ರಾಜ್ಯದಲ್ಲಿ 52,253 ಜನ ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾಗೆ 401 ಜನ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಇಲ್ಲಿಯವರೆಗೆ 27,806 ಜನ ಸಾವನ್ನಪ್ಪಿದಂತಾಗಿದೆ.
ಇಂದು ಬೆಂಗಳೂರಿನಲ್ಲಿ 5,763 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, ಇನ್ನೂ 2,80,697 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಲ್ಲಿ ಇಂದು ಮಹಾಮಾರಿಗೆ 192 ಜನ ಬಲಿಯಾಗಿದ್ದಾರೆ.
ಇಂದು ಬೆಂಗಳೂರು 5,736, ಬೆಳಗಾವಿ 1.147, ಹಾಸನ 1,505, ಮೈಸೂರು 2,240, ತುಮಕೂರಿನಲ್ಲಿ 1,219 ಪ್ರಕರಣಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.