HomeKarnataka Newsರಾಜ್ಯದಲ್ಲಿ ಇಂದು ದಾಖಲೆ ಬರೆದ ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ರಾಜ್ಯದಲ್ಲಿ ಇಂದು ದಾಖಲೆ ಬರೆದ ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದಿನಿಂದ ಲಾಕ್ ಡೌನ ಘೋಷಿಸಿದೆ. ಇಂದು ಸೋಂಕಿತರ ಸಂಖ್ಯೆ ಸಮಾಧಾನಕರವಾಗಿದ್ದರೂ ಸಾವಿನ ಸಂಖ್ಯೆ ಆತಂಕ ಸೃಷ್ಟಿಸುತ್ತಿದೆ. ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, 39,305 ಹೊಸ ಪ್ರಕರಣಗಳು ವರದಿಯಾಗಿವೆ. ಆದರೆ, ಸಾವಿನ ಸಂಖ್ಯೆ ಮಾತ್ರ ದಾಖಲೆ ಬರೆದಿದೆ.

ಇಂದು ರಾಜ್ಯದಲ್ಲಿ 596 ಜನ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,372ಕ್ಕೆ ಏರಿಕೆ ಕಂಡಿದೆ. ಇಂದು 32,188 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 16,747 ಹೊಸ ಪ್ರಕರಣಗಳು ವರದಿಯಾಗಿದ್ದು, 374 ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 3,52,454 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜ್ಯದ ಬಾಗಲಕೋಟೆ 968, ಬಳ್ಳಾರಿ 973, ಬೆಳಗಾವಿ 736, ಬೆಂಗಳೂರು ಗ್ರಾಮಾಂತರ 704, ಬೆಂಗಳೂರು ನಗರ 16,747, ಬೀದರ್ 305, ಚಾಮರಾಜನಗರ 623, ಚಿಕ್ಕಬಳ್ಳಾಪುರ 599, ಚಿಕ್ಕಮಗಳೂರು 362, ಚಿತ್ರದುರ್ಗ 172, ದಕ್ಷಿಣ ಕನ್ನಡ 1,175, ದಾವಣಗೆರೆ 197, ಧಾರವಾಡ 1,006, ಗದಗ 332, ಹಾಸನ 1,800, ಹಾವೇರಿ 214, ಕಲಬುರಗಿ 988, ಕೊಡಗು 534, ಕೋಲಾರ 755, ಕೊಪ್ಪಳ 412, ಮಂಡ್ಯ 1,133, ಮೈಸೂರು 1,537, ರಾಯಚೂರು 582, ರಾಮನಗರ 337, ಶಿವಮೊಗ್ಗ 820, ತುಮಕೂರು 2,168, ಉಡುಪಿ 855, ಉತ್ತರ ಕನ್ನಡ 885, ವಿಜಯಪುರ 659 ಮತ್ತು ಯಾದಗಿರಿಯಲ್ಲಿ 727 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!