HomeKarnataka Newsರಾಜ್ಯದಲ್ಲಿ ಇಂದು ಮತ್ತೆ ಆತಂಕ ಮೂಡಿಸಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಇಂದು ಮತ್ತೆ ಆತಂಕ ಮೂಡಿಸಿದ ಸೋಂಕಿತರ ಸಂಖ್ಯೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಅದರ ಹಾವಳಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.

ಇಂದು ರಾಜ್ಯದಲ್ಲಿ 41,779 ಹೊಸ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, ಇಂದು ಮಹಾಮಾರಿಗೆ 373 ಜನ ಬಲಿಯಾಗಿದ್ದಾರೆ. ಈ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 21,085ಕ್ಕೆ ಏರಿಕೆ ಕಂಡಿದೆ.

ಇಂದು ಬೆಂಗಳೂರು ನಗರದಲ್ಲಿ 14,316 ಹೊಸ ಪ್ರಕರಣಗಳು ವರದಿಯಾಗಿವೆ. ಅಲ್ಲದೇ, 121 ಜನ ಬಲಿಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ 3,60,862 ಸಕ್ರಿಯ ಪ್ರಕರಣಗಳಿವೆ. ಅಲ್ಲದೇ, ರಾಜ್ಯದ ಬಾಗಲಕೋಟೆ 773, ಬಳ್ಳಾರಿ 2,421, ಬೆಳಗಾವಿ 1,592, ಬೆಂಗಳೂರು ಗ್ರಾಮಾಂತರ 707, ಬೆಂಗಳೂರು ನಗರ 14,316, ಬೀದರ್ 223, ಚಾಮರಾಜನಗರ 713, ಚಿಕ್ಕಬಳ್ಳಾಪುರ 676, ಚಿಕ್ಕಮಗಳೂರು 435, ಚಿತ್ರದುರ್ಗ 314, ದಕ್ಷಿಣ ಕನ್ನಡ 1,215, ದಾವಣಗೆರೆ 581, ಧಾರವಾಡ 829, ಗದಗ 591, ಹಾಸನ 1,339, ಹಾವೇರಿ 292, ಕಲಬುರಗಿ 929, ಕೊಡಗು 539, ಕೋಲಾರ 306, ಕೊಪ್ಪಳ 495, ಮಂಡ್ಯ 1,385, ಮೈಸೂರು 2,340, ರಾಯಚೂರು 1,063, ರಾಮನಗರ 459,

ಶಿವಮೊಗ್ಗ 1,045, ತುಮಕೂರು 2,668, ಉಡುಪಿ 1,219, ಉತ್ತರ ಕನ್ನಡ 787, ವಿಜಯಪುರ 444 ಮತ್ತು ಯಾದಗಿರಿಯಲ್ಲಿ 683 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!