HomeKarnataka Newsರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ ಹೇಗಿದೆ?

ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ ಹೇಗಿದೆ?

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ ತಗ್ಗಿದ್ದು, ಇಂದು ಕೇವಲ 3,709 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 139 ಜನ ಸಾವನ್ನಪ್ಪಿದ್ದಾರೆ.

ಇಂದು 8,111 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,18,592 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇದುವರೆಗೂ 3,34,164 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 803 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 26 ಜನ ಸಾವನ್ನಪ್ಪಿದ್ದಾರೆ. ಸದ್ಯ ನಗರದಲ್ಲಿ 69,344 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ 1,745 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ರಾಜ್ಯದ ಬಾಗಲಕೋಟೆ 7, ಬಳ್ಳಾರಿ 44, ಬೆಳಗಾವಿ 134, ಬೆಂಗಳೂರು ಗ್ರಾಮಾಂತರ 103, ಬೆಂಗಳೂರು ನಗರ 803, ಬೀದರ್ 6, ಚಾಮರಾಜನಗರ 52, ಚಿಕ್ಕಬಳ್ಳಾಪುರ 38, ಚಿಕ್ಕಮಗಳೂರು 163, ಚಿತ್ರದುರ್ಗ 77, ದಕ್ಷಿಣ ಕನ್ನಡ 374, ದಾವಣಗೆರೆ 90, ಧಾರವಾಡ 30, ಗದಗ 11, ಹಾಸನ 309, ಹಾವೇರಿ 13, ಕಲಬುರಗಿ 14, ಕೊಡಗು 161, ಕೋಲಾರ 65, ಕೊಪ್ಪಳ 25, ಮಂಡ್ಯ 124, ಮೈಸೂರು 486, ರಾಯಚೂರು 15, ರಾಮನಗರ 20, ಶಿವಮೊಗ್ಗ 169, ತುಮಕೂರು 144, ಉಡುಪಿ 81, ಉತ್ತರ ಕನ್ನಡ 114, ವಿಜಯಪುರ 16 ಮತ್ತು ಯಾದಗಿರಿಯಲ್ಲಿ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!