ರಾಜ್ಯದಲ್ಲಿ ತಪ್ಪುತ್ತಿಲ್ಲ ಸಾವಿನ ಆತಂಕ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಇಂದು ಕೂಡ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಸಾವಿನಲ್ಲಿ ಆತಂಕ ಮನೆ ಮಾಡಿದೆ. ಇಂದು ರಾಜ್ಯದಲ್ಲಿ 24,214 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 31,459 ಜನರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 476 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸತ್ತವರ ಸಂಖ್ಯೆ 27,405ಕ್ಕೆ ತಲುಪಿದೆ.

ಇಂದು ರಾಜಧಾನಿಯಲ್ಲಿ 5,949 ಪ್ರಕರಣಗಳು ವರದಿಯಾಗಿದ್ದು, ಅಲ್ಲದೇ, 273 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 6,643 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರಾಜ್ಯದ ಬಾಗಲಕೋಟೆ 214, ಬಳ್ಳಾರಿಯ 725, ಬೆಳಗಾವಿ 1,147, ಬೆಂಗಳೂರು ಗ್ರಾಮಾಂತರ 623, ಬೆಂಗಳೂರು ನಗರ 5,949, ಬೀದರ್ 60, ಚಾಮರಾಜನಗರ 380, ಚಿಕ್ಕಬಳ್ಳಾಪುರ 238, ಚಿಕ್ಕಮಗಳೂರು 715, ಚಿತ್ರದುರ್ಗ 710, ದಕ್ಷಿಣ ಕನ್ನಡ 555, ದಾವಣಗೆರೆ 806, ಧಾರವಾಡ 678, ಗದಗ 370, ಹಾಸನ 1,505, ಹಾವೇರಿ 159, ಕಲಬುರಗಿ 153, ಕೊಡಗು 337, ಕೋಲಾರ 591, ಕೊಪ್ಪಳ 495, ಮಂಡ್ಯ 755, ಮೈಸೂರು 2,240, ರಾಯಚೂರು 445, ರಾಮನಗರ 263, ಶಿವಮೊಗ್ಗ 822, ತುಮಕೂರು 1,219, ಉಡುಪಿ 905, ಉತ್ತರ ಕನ್ನಡ 659, ವಿಜಯಪುರ 306 ಹಾಗೂ ಯಾದಗಿರಿಯಲ್ಲಿ 190 ಹೊಸ ಪ್ರಕರಣಗಳು ಪತ್ತೆಯಾಗಿವೆ.


Spread the love

LEAVE A REPLY

Please enter your comment!
Please enter your name here