ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತ ಸಾಗುತ್ತಿದೆ. ಇಂದು ರಾಜ್ಯದಲ್ಲಿ 14,304 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ, ಸಾವನ್ನಪ್ಪುವವರ ಸಂಖ್ಯೆಯಲ್ಲಿ ಆತಂಕ ಹೆಚ್ಚಾಗುತ್ತಿದ್ದು, 464 ಜನರು ಬಲಿಯಾಗಿದ್ದಾರೆ.
ಇಂದು ರಾಜ್ಯದ ವಿವಿಧ ಆಸ್ಪತ್ರೆಗಳಿಂದ 29271 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಮಹಾಮಾರಿಗೆ 29,554 ಜನರನ್ನು ಬಲಿ ಪಡೆದಿದೆ.
ಬೆಂಗಳೂರಿನಲ್ಲಿ ಇಂದು 3,418 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 276 ಜನ ಬಲಿಯಾಗಿದ್ದಾರೆ. ಇನ್ನುಳಿದಂತೆ ಬಾಗಲಕೋಟೆ 217, ಬಳ್ಳಾರಿ 399, ಬೆಳಗಾವಿ 891, ಬೆಂಗಳೂರು ಗ್ರಾಮಾಂತರ 202, ಬೆಂಗಳೂರು ನಗರ 3,418, ಬೀದರ್ 22, ಚಾಮರಾಜನಗರ 80, ಚಿಕ್ಕಬಳ್ಳಾಪುರ 152, ಚಿಕ್ಕಮಗಳೂರು 504, ಚಿತ್ರದುರ್ಗ 637, ದಕ್ಷಿಣ ಕನ್ನಡ 536, ದಾವಣಗೆರೆ 178, ಧಾರವಾಡ 267, ಗದಗ 214, ಹಾಸನ 1,127, ಹಾವೇರಿ 219, ಕಲಬುರಗಿ 82, ಕೊಡಗು 162, ಕೋಲಾರ 338, ಕೊಪ್ಪಳ 272, ಮಂಡ್ಯ 337, ಮೈಸೂರು 1,153, ರಾಯಚೂರು 133, ರಾಮನಗರ 138, ಶಿವಮೊಗ್ಗ 520, ತುಮಕೂರು 769, ಉಡುಪಿ 735, ಉತ್ತರ ಕನ್ನಡ 332, ವಿಜಯಪುರ 163 ಮತ್ತು ಯಾದಗಿರಿಯಲ್ಲಿ 107 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.