ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾದರೂ ಸಾವು ಮಾತ್ರ ನಿಲ್ಲುತ್ತಿಲ್ಲ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಮರಣ ಕೇಕೆ ಮಾತ್ರ ಮುಂದುವರೆದಿದೆ. ಇಂದು ರಾಜ್ಯದಲ್ಲಿ 16,387 ಜನರಲ್ಲಿ ಸೋಂಕು ಕಾಣಿಸಿಕೊಡಿದ್ದು, 463 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇಂದು ರಾಜ್ಯದ 21,199 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇಲ್ಲಿಯವರೆಗೂ 26,35,122 ಜನರಲ್ಲಿ ಸೋಂಕು ಕಂಡಿದೆ.

ಅಲ್ಲದೇ, ಸದ್ಯ 2,93,024 ಜನ ಸೋಂಕಿತರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ 30,017 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಇಂದು ಬೆಂಗಳೂರಿನಲ್ಲಿ 4,095 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು ನಗರದಲ್ಲಿ 307 ಜನ ಬಲಿಯಾಗಿದ್ದಾರೆ. ಇನ್ನುಳಿದಂತೆ ಬಾಗಲಕೋಟೆ 262, ಬಳ್ಳಾರಿ 525, ಬೆಳಗಾವಿ 1,006, ಬೆಂಗಳೂರು ಗ್ರಾಮಾಂತರ 164, ಬೆಂಗಳೂರು ನಗರ 4,095, ಬೀದರ್ 23,

ಚಾಮರಾಜನಗರ 258, ಚಿಕ್ಕಬಳ್ಳಾಪುರ 360, ಚಿಕ್ಕಮಗಳೂರು 214, ಚಿತ್ರದುರ್ಗ 483, ದಕ್ಷಿಣ ಕನ್ನಡ 618, ದಾವಣಗೆರೆ 535, ಧಾರವಾಡ 245, ಗದಗ 285, ಹಾಸನ 520, ಹಾವೇರಿ 79, ಕಲಬುರಗಿ 117, ಕೊಡಗು 298, ಕೋಲಾರ 389, ಕೊಪ್ಪಳ 295, ಮಂಡ್ಯ 711, ಮೈಸೂರು 1,687, ರಾಯಚೂರು 249,

ರಾಮನಗರ 165, ಶಿವಮೊಗ್ಗ 548, ತುಮಕೂರು 882, ಉಡುಪಿ 636, ಉತ್ತರ ಕನ್ನಡ 456, ವಿಜಯಪುರ 166 ಮತ್ತು ಯಾದಗಿರಿಯಲ್ಲಿ 116 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

LEAVE A REPLY

Please enter your comment!
Please enter your name here